<p>ಮಸ್ಕಿ: ಸಹಕಾರಿ ಸಂಸ್ಥೆಗಳು ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿರಕ್ತಮಠದ ಅಭಿನವ ಮರಿಸಿದ್ಧಬಸವ ಸ್ವಾಮೀಜಿ ಕರೆ ನೀಡಿದರು.</p>.<p>ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಶುಕ್ರವಾರ ಬಂಧು ಶತಪುರೇಶ ಪತ್ತಿನ ಸೌಹಾರ್ದ ಸಹಕಾರಿ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸಹಕಾರಿ ಸಂಸ್ಥೆಯ ಉತ್ತಮ ಆಡಳಿತ ಮಂಡಳಿ ಹಾಗೂ ಪರಿಣತ ಸಿಬ್ಬಂದಿಯಿಂದ ಸಹಕಾರಿ ಸಂಸ್ಥೆ ಆರ್ಥಿಕವಾಗಿ ಬೆಳೆಯಲು ಸಾಧ್ಯ. ಷೇರುದಾರರು ಹಾಗೂ ಗ್ರಾಹಕರ ನಡುವೆ ಉತ್ತಮವಾದ ವ್ಯವಹಾರ ಸಂಬಂಧ ಹೊಂದಬೇಕು‘ ಎಂದು ಹೇಳಿದರು.</p>.<p>ಮುಖಂಡ ರಾಘವೇಂದ್ರರಾವ್ ಮಾತನಾಡಿ, ಸಹಕಾರಿ ಸಂಸ್ಥೆಯ ಯೋಜನೆಗಳ ಬಗ್ಗೆ ವಿವರಿಸಿದರು.</p>.<p>ಇದೇ ವೇಳೆ ನಿವೃತ್ತ ಯೋಧ ಕೆ.ಗುಡದಯ್ಯ ಪೂಜಾರ ಅವರನ್ನು ಸಹಕಾರಿ ಪರವಾಗಿ ಸನ್ಮಾನಿಸಲಾಯಿತು.</p>.<p>ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಸ್ಕಿ: ಸಹಕಾರಿ ಸಂಸ್ಥೆಗಳು ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ವಿರಕ್ತಮಠದ ಅಭಿನವ ಮರಿಸಿದ್ಧಬಸವ ಸ್ವಾಮೀಜಿ ಕರೆ ನೀಡಿದರು.</p>.<p>ತಾಲ್ಲೂಕಿನ ಬಳಗಾನೂರು ಗ್ರಾಮದಲ್ಲಿ ಶುಕ್ರವಾರ ಬಂಧು ಶತಪುರೇಶ ಪತ್ತಿನ ಸೌಹಾರ್ದ ಸಹಕಾರಿ ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸಹಕಾರಿ ಸಂಸ್ಥೆಯ ಉತ್ತಮ ಆಡಳಿತ ಮಂಡಳಿ ಹಾಗೂ ಪರಿಣತ ಸಿಬ್ಬಂದಿಯಿಂದ ಸಹಕಾರಿ ಸಂಸ್ಥೆ ಆರ್ಥಿಕವಾಗಿ ಬೆಳೆಯಲು ಸಾಧ್ಯ. ಷೇರುದಾರರು ಹಾಗೂ ಗ್ರಾಹಕರ ನಡುವೆ ಉತ್ತಮವಾದ ವ್ಯವಹಾರ ಸಂಬಂಧ ಹೊಂದಬೇಕು‘ ಎಂದು ಹೇಳಿದರು.</p>.<p>ಮುಖಂಡ ರಾಘವೇಂದ್ರರಾವ್ ಮಾತನಾಡಿ, ಸಹಕಾರಿ ಸಂಸ್ಥೆಯ ಯೋಜನೆಗಳ ಬಗ್ಗೆ ವಿವರಿಸಿದರು.</p>.<p>ಇದೇ ವೇಳೆ ನಿವೃತ್ತ ಯೋಧ ಕೆ.ಗುಡದಯ್ಯ ಪೂಜಾರ ಅವರನ್ನು ಸಹಕಾರಿ ಪರವಾಗಿ ಸನ್ಮಾನಿಸಲಾಯಿತು.</p>.<p>ಸಹಕಾರಿ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ಹಾಗೂ ಗ್ರಾಮದ ಮುಖಂಡರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>