ಸಚಿವ ಸಂಪುಟ ಪುನರ್ ರಚನೆ ಆಗುತ್ತಿದ್ದಂತೆ ವಸತಿ ಸಚಿವ ವಿ.ಸೋಮಣ್ಣ ಅವರಿಗೆ ಪ್ರವಾಹ ಮತ್ತು ಕೋವಿಡ್ ನಿರ್ವಹಣೆ ಉಸ್ತುವಾರಿ ವಹಿಸಲಾಗಿತ್ತು. ಮೂರು ದಿನಗಳ ಭೇಟಿ ನಿಗದಿ ಮಾಡಿಕೊಂಡು ಬರುತ್ತಿದ್ದ ಸಚಿ ವರು, ಒಂದೇ ದಿನದಲ್ಲಿ ಬೆಂಗ ಳೂರಿಗೆ ಮರಳು ತ್ತಿದ್ದರು. ಇದಕ್ಕಿದ್ದಂತೆ ಅವರ ಉಸ್ತುವಾರಿಯನ್ನು ಬದಲಾವಣೆಗೊಳಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿದ್ದ ಹಾಲಪ್ಪ ಆಚಾರ್ ಅವರಿಗೆ ರಾಯಚೂರು ಜಿಲ್ಲೆಯ ಉಸ್ತುವಾರಿಯನ್ನು ಹೆಚ್ಚುವರಿಯಾಗಿ ನೀಡಲಾಗಿತ್ತು.