ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಖಾತ್ರಿ’ ಕೆಲಸದ ಅವಧಿ ಹೆಚ್ಚಿಸಿ: ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಒತ್ತಾಯ

ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಒತ್ತಾಯ
Last Updated 4 ನವೆಂಬರ್ 2020, 3:38 IST
ಅಕ್ಷರ ಗಾತ್ರ

ರಾಯಚೂರು: ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕೆಲಸದ ಅವಧಿಯನ್ನು 200 ದಿನಗಳಿಗೆ ಹೆಚ್ಚಿಸಬೇಕು. ಪಡಿತರ ಧಾನ್ಯಗಳ ವಿತರಣೆಯಲ್ಲಿ ತಲಾ 5 ಕೆಜಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ನೇತೃತ್ವದಲ್ಲಿ ಕೂಲಿಕಾರರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮಾನವ ಸರಪಳಿ ನಡೆಸಿ ಪ್ರತಿಭಟನೆ ನಡೆಸಿದರು.

ಆನಂತರ ಈ ಕುರಿತು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಲಾಕ್‍ಡೌನ್ ಮತ್ತು ಕೋವಿಡ್ ಹಿನ್ನೆಲೆಯಲ್ಲಿ
ಲಕ್ಷಾಂತರ ವಲಸೆ ಕಾರ್ಮಿಕರು ಕೆಲಸವಿಲ್ಲದೇ ತಮ್ಮ ಗ್ರಾಮಗಳಿಗೆ ಮರಳಿ ಬಂದಿದ್ದಾರೆ. ಆದರೆ ಸಾವಿರಾರು ಕುಟುಂಬಗಳು ಈಗಾಗಲೇ 100 ದಿನಗಳನ್ನು ಪೂರ್ಣಗೊಳಿಸಿದ್ದಾರೆ. ಮರುವಲಸೆ ಬಂದ ಕುಟುಂಬದ ಸದಸ್ಯರಿಗೆ ಸೇರಿದಂತೆ ಈಗ ಯಾವುದೇ ಉದ್ಯೋಗವಿಲ್ಲದೇ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ದೂರಿದರು.

ಆಹಾರ ಧಾನ್ಯಗಳ ಕೊರತೆಯಿಂದ ತೀವ್ರ ಸಂಕಷ್ಟದಲ್ಲಿದ್ದಾರೆ. ಪ್ರವಾಹದಿಂದಲೂ ಜನರು ತೊಂದರೆಗೆ ಸಿಲುಕಿದ್ದಾರೆ. ಕೂಡಲೇ ಉದ್ಯೋಗ ಖಾತ್ರಿ ಯೋಜನೆಯಡಿ 200 ಮಾನವ ದಿನಗಳಿಗೆ ಹೆಚ್ಚಿಸಬೇಕು ಎಂದು ಆಗ್ರಹಿಸಿದರು.

ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಿ ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಳ್ಳುವುದಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಅಭಯ, ಬಸವರಾಜ,ಗೋವಿಂದು, ಇಮಾನುವೇಲ್, ಪ್ರಶಾಂತ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT