<p><strong>ರಾಯಚೂರು:</strong> ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ 3.5 ಲಕ್ಷ ಕ್ಯುಸೆಕ್ ಅಡಿ ನೀರು ಹೊರಬಿಡುತ್ತಿದ್ದು, ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆ ಶನಿವಾರ ಮುಳುಗಡೆಯಾಗಿದೆ.</p>.<p>ಮುನ್ನೆಚ್ರಿಕೆ ವಹಿಸಿ ನಿನ್ನೆ ರಾತ್ರಿಯಿಂದಲೇ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಕಲಬುರ್ಗಿ- ರಾಯಚೂರು ಮಧ್ಯೆ ಸರ್ಕಾರಿ ಬಸ್ ಗಳು ಸಂಚರಿಸುವ ಪ್ರಮುಖ ಮಾರ್ಗ ಇದಾಗಿತ್ತು. ಇದೀಗ 40 ಕಿಲೋ ಮೀಟರ್ ಸುತ್ತುವರಿದು ತಿಂಥಣಿ ಬ್ರಿಡ್ಜ್ ಮೂಲಕ ಕಲಬುರ್ಗಿಯಿಂದ ರಾಯಚೂರಿಗೆ ಸಂಚರಿಸಬೇಕಿದೆ.</p>.<p>ಖಾಸಗಿ ವಾಹನಗಳು ಕಲಬುರ್ಗಿಯಿಂದ ಯಾದಗಿರಿ, ಶಕ್ತಿನಗರ ಮೂಲಕ ರಾಯಚೂರು ತಲುಪಲು ಅನುಕೂಲವಿದೆ. ಆದರೆ, ಸರ್ಕಾರಿ ಬಸ್ ಗಳು ಈ ಮಾರ್ಗದಲ್ಲಿ ಹೆಚ್ಚವರಿ ಸಂಚರಿಸಲು ತೆಲಂಗಾಣ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ.</p>.<p>ಶಕ್ತಿನಗರ ಪಕ್ಕದ ದೇವುಸುಗೂರು ಸೇತುವೆ ಎರಡು ರಾಜ್ಯಗಳ ಗಡಿಭಾಗದಲ್ಲಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/district/uthara-kannada/karnataka-rains-and-floods-heavy-rain-in-sirsi-karwar-uttar-kannada-851148.html" target="_blank">ಗಂಗಾವಳಿ ಪ್ರವಾಹ: ಕೊಚ್ಚಿಹೋದ ಸೇತುವೆ, ದ್ವೀಪದಂತಾದ ಗ್ರಾಮಗಳು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ 3.5 ಲಕ್ಷ ಕ್ಯುಸೆಕ್ ಅಡಿ ನೀರು ಹೊರಬಿಡುತ್ತಿದ್ದು, ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆ ಶನಿವಾರ ಮುಳುಗಡೆಯಾಗಿದೆ.</p>.<p>ಮುನ್ನೆಚ್ರಿಕೆ ವಹಿಸಿ ನಿನ್ನೆ ರಾತ್ರಿಯಿಂದಲೇ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಕಲಬುರ್ಗಿ- ರಾಯಚೂರು ಮಧ್ಯೆ ಸರ್ಕಾರಿ ಬಸ್ ಗಳು ಸಂಚರಿಸುವ ಪ್ರಮುಖ ಮಾರ್ಗ ಇದಾಗಿತ್ತು. ಇದೀಗ 40 ಕಿಲೋ ಮೀಟರ್ ಸುತ್ತುವರಿದು ತಿಂಥಣಿ ಬ್ರಿಡ್ಜ್ ಮೂಲಕ ಕಲಬುರ್ಗಿಯಿಂದ ರಾಯಚೂರಿಗೆ ಸಂಚರಿಸಬೇಕಿದೆ.</p>.<p>ಖಾಸಗಿ ವಾಹನಗಳು ಕಲಬುರ್ಗಿಯಿಂದ ಯಾದಗಿರಿ, ಶಕ್ತಿನಗರ ಮೂಲಕ ರಾಯಚೂರು ತಲುಪಲು ಅನುಕೂಲವಿದೆ. ಆದರೆ, ಸರ್ಕಾರಿ ಬಸ್ ಗಳು ಈ ಮಾರ್ಗದಲ್ಲಿ ಹೆಚ್ಚವರಿ ಸಂಚರಿಸಲು ತೆಲಂಗಾಣ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ.</p>.<p>ಶಕ್ತಿನಗರ ಪಕ್ಕದ ದೇವುಸುಗೂರು ಸೇತುವೆ ಎರಡು ರಾಜ್ಯಗಳ ಗಡಿಭಾಗದಲ್ಲಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/district/uthara-kannada/karnataka-rains-and-floods-heavy-rain-in-sirsi-karwar-uttar-kannada-851148.html" target="_blank">ಗಂಗಾವಳಿ ಪ್ರವಾಹ: ಕೊಚ್ಚಿಹೋದ ಸೇತುವೆ, ದ್ವೀಪದಂತಾದ ಗ್ರಾಮಗಳು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>