<p><strong>ರಾಯಚೂರು:</strong> ನಾರಾಯಪುರ ಜಲಾಶಯದಿಂದ ಕೃಷ್ಣಾನದಿಗೆ ಹೊರಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಲಿಂಗಸುಗೂರು ತಾಲ್ಲೂಕಿನ ನಡುಗಡ್ಡೆ ಶೀಲಹಳ್ಳಿ ಸಂಪರ್ಕಿಸುವ ಸೇತುವೆಯು ಶುಕ್ರವಾರ ಮುಳುಗಡೆಯಾಗಿದೆ.</p>.<p>ಬೆಳಿಗ್ಗೆ 11 ಗಂಟೆಗೆ 29 ಕ್ರೆಸ್ಟ್ ಗೇಟುಗಳಿಂದ 1.98 ಲಕ್ಷ ಕ್ಯುಸೆಕ್ ನೀರು ಹೊರ ಬಿಡುತ್ತಿದ್ದು, ಸಂಜೆಯವರೆಗೂ 2.5 ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗುವುದು ಎಂದು ಜಲಾಶಯ ನಿರ್ವಹಣೆ ಎಂಜಿನಿಯರುಗಳು ಮುನ್ನಚ್ಚರಿಕೆ ನೀಡಿದ್ದಾರೆ.</p>.<p>ನದಿಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತವು ಈಗಾಗಲೇ ದೇವದುರ್ಗ, ಲಿಂಗಸುಗೂರು ಹಾಗೂ ರಾಯಚೂರು ತಾಲ್ಲೂಕು ಆಡಳಿತಗಳಿಗೆ ಸೂಚಿಸಿದೆ.</p>.<p>ಪ್ರವಾಹವು 3 ಲಕ್ಷ ಕ್ಯುಸೆಕ್ ಮೀರಿದರೆ ದೇದುರ್ಗ ಪಕ್ಕದ ಹೂವಿನಹೆಡಗಿ ಸೇತುವೆ ಮುಳುಗಡೆ ಆಗುತ್ತದೆ. ಇದರಿಂದ ಕಲಬುರ್ಗಿ- ರಾಯಚೂರು ಸಂಪರ್ಕದ ಒಂದು ಮಾರ್ಗ ಸ್ಥಗಿತವಾಗೊಂಡು, ಸುತ್ತುವರೆದು ಸಂಚರಿಸಬೇಕಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ನಾರಾಯಪುರ ಜಲಾಶಯದಿಂದ ಕೃಷ್ಣಾನದಿಗೆ ಹೊರಬಿಡುತ್ತಿರುವ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಲಿಂಗಸುಗೂರು ತಾಲ್ಲೂಕಿನ ನಡುಗಡ್ಡೆ ಶೀಲಹಳ್ಳಿ ಸಂಪರ್ಕಿಸುವ ಸೇತುವೆಯು ಶುಕ್ರವಾರ ಮುಳುಗಡೆಯಾಗಿದೆ.</p>.<p>ಬೆಳಿಗ್ಗೆ 11 ಗಂಟೆಗೆ 29 ಕ್ರೆಸ್ಟ್ ಗೇಟುಗಳಿಂದ 1.98 ಲಕ್ಷ ಕ್ಯುಸೆಕ್ ನೀರು ಹೊರ ಬಿಡುತ್ತಿದ್ದು, ಸಂಜೆಯವರೆಗೂ 2.5 ಲಕ್ಷ ಕ್ಯುಸೆಕ್ ಗೆ ಹೆಚ್ಚಿಸಲಾಗುವುದು ಎಂದು ಜಲಾಶಯ ನಿರ್ವಹಣೆ ಎಂಜಿನಿಯರುಗಳು ಮುನ್ನಚ್ಚರಿಕೆ ನೀಡಿದ್ದಾರೆ.</p>.<p>ನದಿಪಾತ್ರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಜಿಲ್ಲಾಡಳಿತವು ಈಗಾಗಲೇ ದೇವದುರ್ಗ, ಲಿಂಗಸುಗೂರು ಹಾಗೂ ರಾಯಚೂರು ತಾಲ್ಲೂಕು ಆಡಳಿತಗಳಿಗೆ ಸೂಚಿಸಿದೆ.</p>.<p>ಪ್ರವಾಹವು 3 ಲಕ್ಷ ಕ್ಯುಸೆಕ್ ಮೀರಿದರೆ ದೇದುರ್ಗ ಪಕ್ಕದ ಹೂವಿನಹೆಡಗಿ ಸೇತುವೆ ಮುಳುಗಡೆ ಆಗುತ್ತದೆ. ಇದರಿಂದ ಕಲಬುರ್ಗಿ- ರಾಯಚೂರು ಸಂಪರ್ಕದ ಒಂದು ಮಾರ್ಗ ಸ್ಥಗಿತವಾಗೊಂಡು, ಸುತ್ತುವರೆದು ಸಂಚರಿಸಬೇಕಾಗುತ್ತದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>