ಚಾಮರಾಜನಗರ: ‘ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರ ಸೇವೆ ಮಹತ್ವದ್ದಾಗಿದೆ’ ಎಂದು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾ ಧೀಶ ಜಿ.ಬಸವರಾಜು ಹೇಳಿದರು.ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಸೋಮವಾರ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪೊಲೀಸ್ ಸೇವೆ ಇಲ್ಲದಿದ್ದರೆ ಕಾನೂನು ಸುವ್ಯವಸ್ಥೆ ಕುಸಿದು ಅರಾಜಕಥೆ, ಅಶಾಂತಿ ಉಂಟಾಗುತ್ತದೆ. ಗುಂಪುಗಾರಿಕೆ, ಕೋಮುಗಲಭೆ ನಡೆದು ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಪೊಲೀಸ್ ಇಲಾಖೆ ಹೊರಬೇಕಿದೆ ಎಂದು ತಿಳಿಸಿದರು.