ದೇವದುರ್ಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಮಾದಿಗ ಸಮಾಜವನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಹನುಮಂತಪ್ಪ ಮನ್ನಾಪೂರು ಆರೋಪಿಸಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ 36 ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳ ಪೈಕಿ ಛಲವಾದಿ ಜನಾಂಗಕ್ಕೆ 19, ಲಂಬಾಣಿ ಸಮಾಜಕ್ಕೆ 5,ಭೋವಿ ಸಮಾಜಕ್ಕೆ 4 ಮತ್ತು ಮಾದಿಗ ಸಮಾಜಕ್ಕೆ ಕೇವಲ 8 ಸೀಟು ನೀಡುವ ಮೂಲಕ ಪರಿಶಿಷ್ಟ ಜಾತಿಯ ರಾಜ್ಯದ ಬಹುದೊಡ್ಡ ಸಮುದಾಯವಾದ ಮಾದಿಗ ಸಮಾಜಕ್ಕೆ ಕಾಂಗ್ರೆಸ್ ಪಕ್ಷ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.