ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಉಪನ್ಯಾಸಕರಿಗೆ ನೇಮಕಾತಿ ಆದೇಶ ನೀಡಲು ಒತ್ತಾಯ

Last Updated 28 ಸೆಪ್ಟೆಂಬರ್ 2020, 8:12 IST
ಅಕ್ಷರ ಗಾತ್ರ

ರಾಯಚೂರು: ಪದವಿ ಪೂರ್ವ ಕಾಲೇಜುಗಳ ಖಾಲಿ ಇರುವ ಉಪನ್ಯಾಸಕ ಹುದ್ದೆಗಳ ನೇಮಕಾತಿ ನಡೆದಿದ್ದು, ಕೂಡಲೇ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರ ನೀಡಬೇಕು ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯ ಸಂಚಾಲಕ ರಜಾಕ್ ಉಸ್ತಾದ್ ಒತ್ತಾಯಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕ ಹುದ್ದೆಗಳಿಗೆ 2015ರಿಂದ 1206 ಹುದ್ದೆಗಳಿಗೆ ನೇಮಕಾತಿ ಮಾಡಿಕೊಂಡು ಬರುತ್ತಿದೆ. ಈ ಪ್ರಕ್ರಿಯೆ ಐದು ವರ್ಷಗಳಾದರೂ ಪೂರ್ಣಗೊಂಡಿಲ್ಲ.

1206 ಉಪನ್ಯಾಸಕ ಹುದ್ದೆಗಳಲ್ಲಿ 594 ಹುದ್ದೆಗಳು ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು 371(ಜೆ)ಯಡಿ ಮೇರಿಟ್ ಆಧಾರದ ಮೇಲೆ 98 ಹುದ್ದೆಗಳು ಹಾಗೂ ಉಳಿದ ವೃಂದದಲ್ಲಿ ಆಯ್ಕೆಯಾಗಿದ್ದಾರೆ. ಉಳಿದ ವೃಂದದ ಹುದ್ದೆಗಳಿಗೆ ಆಯ್ಕೆಯಾದ ಕ.ಕ ಭಾಗದ ಅಭ್ಯರ್ಥಿಗಳ ವಿರುದ್ದ ಇನ್ನಿತರೆ ಪ್ರದೇಶದ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ)ಯಲ್ಲಿ ದೂರು ದಾಖಲಿಸಿ ತಡೆಯಾಜ್ಞೆ ಪಡೆಯಲಾಗಿತ್ತು ಎಂದು ಹೇಳಿದರು.

ನ್ಯಾಯಮಂಡಳಿ ನೀಡಿದ ತಡೆಯಾಜ್ಞೆ ತೆರುವುಗೊಳಿಸಿ ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳು ಮೆರಿಟ್ ಆಧಾರದಲ್ಲಿ ಮಿಕ್ಕುಳಿದ ವೃಂದದಲ್ಲಿ ಆಯ್ಕೆಯಾಗಬಹುದು ಎಂದು ಆದೇಶಿಸಿದೆ. ಆದರೆ, ಸರ್ಕಾರ ಶೀಘ್ರವಾಗಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿ ನೇಮಕಾತಿ ಆದೇಶ ನೀಡಿದರೆ, ಪ್ರಕ್ರಿಯೆ ಪೂರ್ಣವಾಗುತ್ತಿತ್ತು ಎಂದರು.

ಸರ್ಕಾರದ ವಿಳಂಬ ನೀತಿಯಿಂದ ಇತರ ಪ್ರದೇಶದ ಅಭ್ಯರ್ಥಿಗಳು ಕ.ಕ ಪ್ರದೇಶದ ಅಭ್ಯರ್ಥಿಗಳ ವಿರುದ್ಧ ಹೈಕೋರ್ಟ್‍ನಲ್ಲಿ ದೂರು ಸಲ್ಲಿಸಿದ್ದಾರೆ. ನ್ಯಾಯಾಲಯವು ಇಡೀ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದರೆ ಈ ಭಾಗದ ಅಭ್ಯರ್ಥಿಗಳಿಗೆ ಸಮಸ್ಯೆ ಎದುರಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಇಂಥಹ ಪ್ರಕರಣದಲ್ಲಿ ನ್ಯಾಯಾಲಯವು ಪದವಿ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನೇಮಕಾತಿ ಸಂದರ್ಭದಲ್ಲಿ ಕ.ಕ ಭಾಗದ ಅಭ್ಯರ್ಥಿಗಳ ಮೆರಿಟ್ ಆಧಾರದಲ್ಲಿ ಉಳಿದ ವೃಂದದಲ್ಲಿ ಆಯ್ಕೆಯಾಗಿರುವದು ಸರಿಯಾಗಿದೆ ಎಂದು ತಿಳಿಸಿದೆ ಎಂದರು.

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ ನಿರ್ಲಕ್ಷ್ಯತನದಿಂದಾಗಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಆತಂಕ ಎದುರಾಗಿದ್ದು ಈಗಾಗಲೇ ಜುಲೈ- ಆಗಸ್ಟ್ ತಿಂಗಳಲ್ಲಿ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಪ್ರಕ್ರಿಯೆ ಕೈಗೊಂಡಿರುವ ಸರ್ಕಾರ ನೇಮಕಾತಿ ಆದೇಶ ನೀಡಿದೇ ಆರ್ಥಿಕದ ನೆಪ ಹೇಳಿ ಮುಂದೂಡುತ್ತಿದೆ ಎಂದು ದೂರಿದರು.

ವಿಳಂಬ ಮಾಡದೇ ಕೂಡಲೇ ಕ.ಕ ಪ್ರದೇಶದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಬೇಕು ಎಂದು ಒತ್ತಾಯಿಸಿದರು.ಎಸ್.ಶಿವಕುಮಾರ ಯಾದವ ಮಹಮ್ಮದ್ ರಫೀಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT