<p><strong>ಸಿರವಾರ</strong>: ಅಕಾಲಿಕ ಮಳೆಗೆ ಹಾನಿಗೊಳಗಾಗಿರುವ ಬೆಳೆ ಸಮೀಕ್ಷೆ ಮಾಡಿ, ಕೂಡಲೇ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ವಿಜಯೇಂದ್ರ ಹುಲಿನಾಯಕ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.</p>.<p>ನಿರಂತರವಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ಭತ್ತ, ತೊಗರಿ, ಹತ್ತಿ, ಮೆಣಸಿಕಾಯಿ, ಸಜ್ಜೆ ಸೇರಿದಂತೆ ಪ್ರತಿಯೊಂದು ಬೆಳೆಯು ನಾಶವಾಗಿದ್ದು, ಕೂಡಲೇ ನಷ್ಟವಾದ ಬೆಳೆಯನ್ನು ಸರ್ವೆ ಮಾಡಿ ಒಂದು ಹೆಕ್ಟೇರ್ ಪ್ರದೇಶಕ್ಕೆ ಕನಿಷ್ಠ ₹ 50 ಸಾವಿರ ಪರಿಹಾರ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಬೊಮ್ಮನಾಳ ಉಪಾಧ್ಯಯ ವೀರೇಶ ಗುಡದಿನ್ನಿ, ಹುಲಿಗೆಪ್ಪ ಮಡಿವಾಳ, ರಮೇಶ ಅಂಗಡಿ, ಎಚ್.ಕೆ.ಚನ್ನಬಸವ, ಚಂದ್ರು ಹಡಪದ, ಎಚ್.ಕೆ.ಬಸವರಾಜ, ಬಸವರಾಜ ಚಾಗಭಾವಿ, ವೆಂಕಟೇಶ ಲಕ್ಕಂದಿನ್ನಿ, ಕಾಶಪ್ಪ, ಶಿವಪ್ಪ ಸೇರಿದಂತೆ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ಅಕಾಲಿಕ ಮಳೆಗೆ ಹಾನಿಗೊಳಗಾಗಿರುವ ಬೆಳೆ ಸಮೀಕ್ಷೆ ಮಾಡಿ, ಕೂಡಲೇ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ವಿಜಯೇಂದ್ರ ಹುಲಿನಾಯಕ ಅವರಿಗೆ ಬುಧವಾರ ಮನವಿ ಸಲ್ಲಿಸಲಾಯಿತು.</p>.<p>ನಿರಂತರವಾಗಿ ಸುರಿದ ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದ ಭತ್ತ, ತೊಗರಿ, ಹತ್ತಿ, ಮೆಣಸಿಕಾಯಿ, ಸಜ್ಜೆ ಸೇರಿದಂತೆ ಪ್ರತಿಯೊಂದು ಬೆಳೆಯು ನಾಶವಾಗಿದ್ದು, ಕೂಡಲೇ ನಷ್ಟವಾದ ಬೆಳೆಯನ್ನು ಸರ್ವೆ ಮಾಡಿ ಒಂದು ಹೆಕ್ಟೇರ್ ಪ್ರದೇಶಕ್ಕೆ ಕನಿಷ್ಠ ₹ 50 ಸಾವಿರ ಪರಿಹಾರ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.</p>.<p>ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಬೊಮ್ಮನಾಳ ಉಪಾಧ್ಯಯ ವೀರೇಶ ಗುಡದಿನ್ನಿ, ಹುಲಿಗೆಪ್ಪ ಮಡಿವಾಳ, ರಮೇಶ ಅಂಗಡಿ, ಎಚ್.ಕೆ.ಚನ್ನಬಸವ, ಚಂದ್ರು ಹಡಪದ, ಎಚ್.ಕೆ.ಬಸವರಾಜ, ಬಸವರಾಜ ಚಾಗಭಾವಿ, ವೆಂಕಟೇಶ ಲಕ್ಕಂದಿನ್ನಿ, ಕಾಶಪ್ಪ, ಶಿವಪ್ಪ ಸೇರಿದಂತೆ ರೈತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>