ರಾಯಚೂರು: ಜಿಲ್ಲೆಯ ದೇವದುರ್ಗ ತಾಲ್ಲೂಕಿನ ವಿವಿಧ ತಾಂಡಾಗಳಿಂದ ಮುಂಬೈ ಹಾಗೂ ಪುನಾ ಮಹಾನಗರಗಳಿಗೆ ಕೆಲಸಕ್ಕಾಗಿ ಗುಳೆ ಹೋಗಿದ್ದ ಜನರು ಶನಿವಾರ ಮರಳಿ ಬಂದಿದ್ದು, ಮಾಹಿತಿ ತಿಳಿದು ಸ್ಥಳೀಯ ವೈದ್ಯಾಧಿಕಾರಿಗಳು ಒಟ್ಟು 118 ಜನರ ಆರೋಗ್ಯ ತಪಾಸಣೆ ಮಾಡಿದರು.
ಮನೆಯಿಂದ ಹೊರಗೆ ಹೆಚ್ಚು ಕಾಲ ಇರಬಾರದು, ಸೀತ, ಕೆಮ್ಮು, ಜ್ವರ ಬಂದರೆ ಕೂಡಲೇ ಮಾಹಿತಿ ನೀಡುವಂತೆ ತಿಳಿವಳಿಕೆ ನೀಡಿದರು.