‘ಟಿಪ್ಪು ಜಯಂತಿ ಆಚರಣೆ ಮಾತ್ರ ಕೈಬಿಡಲಾಗುವುದು. ಪಠ್ಯದಲ್ಲಿ ಟಿಪ್ಪು ಪಾಠ ಕೈಬಿಡುವ ವಿಚಾರದ ಬಗ್ಗೆ ಸಮಿತಿಯೊಂದನ್ನು ರಚಿಸಲಾಗಿದೆ. ಸಮಿತಿ ವರದಿ ಆಧರಿಸಿ ನಿರ್ಧಾರ ಕೈಗೊಳ್ಳುವುದು ಸಿಎಂ ವಿವೇಚನೆಗೆ ಬಿಡಲಾಗಿದೆ’ ಎಂದು ದ್ವಂದ್ವ ಇರುವುದನ್ನು ಬಹಿರಂಗಗೊಳಿಸಿದರು.
ಸಿದ್ದರಾಮಯ್ಯ ಚರ್ಚೆಗೆ ಬರಲಿ: ‘ರಾಜ್ಯದಲ್ಲಿ ಸರ್ಕಾರ ಸತ್ತಿದೆ ಎಂದು ಟೀಕೆ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ಹತಾಶೆಯಿಂದ ಕೂಡಿದೆ. ಸರ್ಕಾರದ 100 ದಿನಗಳ ಸಾಧನೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಕ್ಕೆ ಬರಲಿ’ ಎಂದು ಸವಾಲು ಹಾಕಿದರು.