<p><strong>ರಾಯಚೂರು: </strong>ತೊಗರಿ ಖರೀದಿಗೆ ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚು ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕ ರಂಗನಾಥ ಅವರಿಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರಿಂದ ಬೆಂಬಲ ಬೆಲೆ ಯೋಜನೆ ಅಡಿ ತೊಗರಿ ಖರೀದಿ ಮಾಡುವ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆ ಅಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಖರೀದಿಸಲು ಈಗಾಗಲೇ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ₹5,800 ಹಾಗೂ ರಾಜ್ಯ ಸರ್ಕಾರ ₹300 ಸೇರಿದಂತೆ ಒಟ್ಟು 1 ಕ್ವಿಂಟಾಲ್ಗೆ ₹6100 ಬೆಂಬಲ ಬೆಲೆ ನೀಡಿ ತೊಗರಿ ಖರೀದಿಸಬೇಕಿದೆ. ಅದಕ್ಕೆ ಪೂರ್ವಭಾವಿಯಾಗಿ ಜಿಲ್ಲೆಯಾದ್ಯಂತ ಆರಂಭಿಸಲಾಗುವ ತೊಗರಿ ಖರೀದಿ ಕೇಂದ್ರಗಳಲ್ಲಿ 2020 ಜನೇವರಿ 9 ರ ಒಳಗೆ ಬೆಂಬೆಲ ಬೆಲೆಗೆ ತೊಗರಿ ಮಾರಾಟ ಮಾಡುವ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ಪ್ರಕ್ರಿಯೆಯನ್ನು ಡಿಸೆಂಬರ್ 24 ರ ಮಂಗಳವಾರದಿಂದಲೇ ಪ್ರಾರಂಭಿಸುವಂತೆ ನಿರ್ದೇಶನ ನೀಡಿದರು.</p>.<p>ರೈತರು ಪಹಣಿ, ಮೊಬೈಲ್ ಹಾಗೂ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆ ಹಾಗೂ ಆಧಾರ್ ದೃಢೀಕರಣವನ್ನು ಸಂಬಂಧಿಸಿದ ತೊಗರಿ ಖರೀದಿ ಕೇಂದ್ರಗಳಲ್ಲಿ ಸಲ್ಲಿಸಬೇಕು. ಪ್ರತಿ ರೈತರಿಂದ 10 ಕ್ವಿಂಟಾಲ್ ತೊಗರಿಯನ್ನು ಬೆಂಬಲ ಬೆಲೆಗೆ ಖರೀದಿಸಲಾಗುವುದು.</p>.<p>ಈ ಬಾರಿ ತೊಗರಿ ಖರೀದಿಗೆ ಬೇಡಿಕೆ ಹೆಚ್ಚಿರುವುದರಿಂದ ಕಳೆದ ವರ್ಷ ಆರಂಭಿಸಿದ್ದ ಕೇಂದ್ರಗಳಲ್ಲದೆ, ಹೊಸದಾಗಿ ಸಿಂಧನೂರು ತಾಲ್ಲೂಕಿನ ಗುಡುದೂರು, ಜವಳಗೇರಾ, ಲಿಂಗಸೂಗೂರು ತಾಲ್ಲೂಕಿನ ಮಾವಿನ ಬಾವಿ, ಗೌಡೂರು, ಬಯ್ಯಾಪೂರು, ನಾಗಾಲಾಪೂರ, ಮಸ್ಕಿ ತಾಲ್ಲೂಕಿನ ಮೆದಕಿನಾಳ ಹಾಗೂ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳದಲ್ಲಿ 8 ಹೊಸ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ತಿಳಿಸಿದರು.</p>.<p>ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕರು, ಮಾರ್ಕ್ ಫೆಡರೇಷನ್ನ ವ್ಯವಸ್ಥಾಪಕರು, ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಂಘ (ಪಿಎಪಿಸಿಎಂಎಸ್), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ರೈತರ ಉತ್ಪಾದಕ ಸಂಘಗಳ ಮುಖ್ಯಸ್ಥರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ತೊಗರಿ ಖರೀದಿಗೆ ಜಿಲ್ಲೆಯಾದ್ಯಂತ 30ಕ್ಕೂ ಹೆಚ್ಚು ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಕೃಷಿ ಮಾರಾಟ ಇಲಾಖೆಯ ಉಪ ನಿರ್ದೇಶಕ ರಂಗನಾಥ ಅವರಿಗೆ ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತರಿಂದ ಬೆಂಬಲ ಬೆಲೆ ಯೋಜನೆ ಅಡಿ ತೊಗರಿ ಖರೀದಿ ಮಾಡುವ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಕೇಂದ್ರ ಸರ್ಕಾರವು ಬೆಂಬಲ ಬೆಲೆ ಯೋಜನೆ ಅಡಿ ಎಫ್ಎಕ್ಯೂ ಗುಣಮಟ್ಟದ ತೊಗರಿ ಖರೀದಿಸಲು ಈಗಾಗಲೇ ಅನುಮತಿ ನೀಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ₹5,800 ಹಾಗೂ ರಾಜ್ಯ ಸರ್ಕಾರ ₹300 ಸೇರಿದಂತೆ ಒಟ್ಟು 1 ಕ್ವಿಂಟಾಲ್ಗೆ ₹6100 ಬೆಂಬಲ ಬೆಲೆ ನೀಡಿ ತೊಗರಿ ಖರೀದಿಸಬೇಕಿದೆ. ಅದಕ್ಕೆ ಪೂರ್ವಭಾವಿಯಾಗಿ ಜಿಲ್ಲೆಯಾದ್ಯಂತ ಆರಂಭಿಸಲಾಗುವ ತೊಗರಿ ಖರೀದಿ ಕೇಂದ್ರಗಳಲ್ಲಿ 2020 ಜನೇವರಿ 9 ರ ಒಳಗೆ ಬೆಂಬೆಲ ಬೆಲೆಗೆ ತೊಗರಿ ಮಾರಾಟ ಮಾಡುವ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ಪ್ರಕ್ರಿಯೆಯನ್ನು ಡಿಸೆಂಬರ್ 24 ರ ಮಂಗಳವಾರದಿಂದಲೇ ಪ್ರಾರಂಭಿಸುವಂತೆ ನಿರ್ದೇಶನ ನೀಡಿದರು.</p>.<p>ರೈತರು ಪಹಣಿ, ಮೊಬೈಲ್ ಹಾಗೂ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆ ಹಾಗೂ ಆಧಾರ್ ದೃಢೀಕರಣವನ್ನು ಸಂಬಂಧಿಸಿದ ತೊಗರಿ ಖರೀದಿ ಕೇಂದ್ರಗಳಲ್ಲಿ ಸಲ್ಲಿಸಬೇಕು. ಪ್ರತಿ ರೈತರಿಂದ 10 ಕ್ವಿಂಟಾಲ್ ತೊಗರಿಯನ್ನು ಬೆಂಬಲ ಬೆಲೆಗೆ ಖರೀದಿಸಲಾಗುವುದು.</p>.<p>ಈ ಬಾರಿ ತೊಗರಿ ಖರೀದಿಗೆ ಬೇಡಿಕೆ ಹೆಚ್ಚಿರುವುದರಿಂದ ಕಳೆದ ವರ್ಷ ಆರಂಭಿಸಿದ್ದ ಕೇಂದ್ರಗಳಲ್ಲದೆ, ಹೊಸದಾಗಿ ಸಿಂಧನೂರು ತಾಲ್ಲೂಕಿನ ಗುಡುದೂರು, ಜವಳಗೇರಾ, ಲಿಂಗಸೂಗೂರು ತಾಲ್ಲೂಕಿನ ಮಾವಿನ ಬಾವಿ, ಗೌಡೂರು, ಬಯ್ಯಾಪೂರು, ನಾಗಾಲಾಪೂರ, ಮಸ್ಕಿ ತಾಲ್ಲೂಕಿನ ಮೆದಕಿನಾಳ ಹಾಗೂ ದೇವದುರ್ಗ ತಾಲ್ಲೂಕಿನ ಸುಂಕೇಶ್ವರಹಾಳದಲ್ಲಿ 8 ಹೊಸ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ತಿಳಿಸಿದರು.</p>.<p>ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ಸಹಕಾರ ಸಂಘಗಳ ಉಪನಿಬಂಧಕರು, ಮಾರ್ಕ್ ಫೆಡರೇಷನ್ನ ವ್ಯವಸ್ಥಾಪಕರು, ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಂಘ (ಪಿಎಪಿಸಿಎಂಎಸ್), ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ರೈತರ ಉತ್ಪಾದಕ ಸಂಘಗಳ ಮುಖ್ಯಸ್ಥರು, ಮುಖ್ಯಕಾರ್ಯನಿರ್ವಹಣಾಧಿಕಾರಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>