ಹೋರಾಟಗಾರ ಆರ್.ಮಾನಸಯ್ಯ ಮಾತನಾಡಿ, 'ಅಪಾದಿತರ ವಿರುದ್ಧ ದೂರು ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಕಳುಹಿಸುವುದು ಪೊಲೀಸರ ಕೆಲಸ. ಈ ಕೃತ್ಯದ ಬಗ್ಗೆ ಅಪಾದಿತರು ಮೊಬೈಲ್ನಲ್ಲಿ ಕ್ಷಮೆ ಕೂಡಾ ಕೋರಿದ್ದಾರೆ. ತಪ್ಪು ಮಾಡುವುದು ಒಂದು ಕಡೆ, ತಪ್ಪು ಮುಚ್ಚಿಕೊಳ್ಳಲು ಅಧಿಕಾರ ಬಳಸಿಕೊಂಡು ಮಾಧ್ಯಮಗಳಿಗೆ ಸ್ಪಷ್ಟನೆ ಕೂಡಾ ನೀಡಿದ್ದಾರೆ.ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದರಿಂದ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು.ಇದು ಸಂವಿಧಾನಕ್ಕೆ ಮಾಡಿರುವ ಅಪಮಾನ. ಮಾಧ್ಯಮಗಳಿಗೆ ನೀಡಿದ ಹೇಳಿಕೆ ಖಂಡನೀಯ. ಕೂಡಲೇ ಅದನ್ನು ವಾಪಸ್ ಪಡೆಯಬೇಕು' ಎಂದು ಹೇಳಿದರು.