<p>ದೇವದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಹಾಗೂ ಬಂಡವಾಳ ಶಾಹಿಗಳ ಕೈಗೊಂಬೆಯಾಗಿ, ಕಾರ್ಮಿಕ ವರ್ಗವನ್ನು ಶೋಷಣೆಗೆ ಒಳಪಡಿಸಿದೆ ಎಂದು ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ ಆರೋಪಿಸಿದರು.</p>.<p>ಪಟ್ಟಣದ ಎಪಿಎಂಸಿ ಆವರಣದ ಕಾರ್ಮಿಕ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಮಿಕ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ, ದುಡಿಯುವ ವರ್ಗದ ಕತ್ತು ಇಸುಕಿದೆ. ಬಡ ಕಾರ್ಮಿಕರನ್ನು ಬೀದಿಗೆ ತಂದಿದೆ. ಮೂರು ಕೃಷಿ ಕಾಯ್ದೆಗಳ ಮೂಲಕ ರೈತರನ್ನು ಒಕ್ಕಲೆ ಬ್ಬಿಸುವ ಜತೆಗೆ ಬಡವರ ಬದುಕು ಕಿತ್ತುಕೊಳ್ಳಲು ಯತ್ನಿಸಿತು ಎಂದರು.</p>.<p>ನಿರಂತರ ಬೆಲೆ ಏರಿಕೆಯಿಂದ ಬಡವರು ಬದುಕು ನಡೆಸುವುದು ಕಷ್ಟ ವಾಗಿದೆ. ಕೇಂದ್ರ ಸರ್ಕಾರ ಏನು ನಡೆ ದಿಲ್ಲ ಎನ್ನುವಂತೆ ವರ್ತಿಸುತ್ತಿದೆ ಎಂದರು.</p>.<p>ಸಿಐಟಿಯು ತಾಲ್ಲೂಕು ಅಧ್ಯಕ್ಷೆ ರಂಗಮ್ಮ ಅನ್ವರ್, ಮುಖಂಡರಾದ ರಮಾ ದೇವಿ, ಮರಿಯಮ್ಮ, ಯೂಸೂಫ್, ಮನೋಹರ್, ಶ್ರೀಲೇಖಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇವದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಹಾಗೂ ಬಂಡವಾಳ ಶಾಹಿಗಳ ಕೈಗೊಂಬೆಯಾಗಿ, ಕಾರ್ಮಿಕ ವರ್ಗವನ್ನು ಶೋಷಣೆಗೆ ಒಳಪಡಿಸಿದೆ ಎಂದು ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಗಿರಿಯಪ್ಪ ಪೂಜಾರಿ ಆರೋಪಿಸಿದರು.</p>.<p>ಪಟ್ಟಣದ ಎಪಿಎಂಸಿ ಆವರಣದ ಕಾರ್ಮಿಕ ಕಚೇರಿಯಲ್ಲಿ ಭಾನುವಾರ ನಡೆದ ಕಾರ್ಮಿಕ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.</p>.<p>ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡಿ, ದುಡಿಯುವ ವರ್ಗದ ಕತ್ತು ಇಸುಕಿದೆ. ಬಡ ಕಾರ್ಮಿಕರನ್ನು ಬೀದಿಗೆ ತಂದಿದೆ. ಮೂರು ಕೃಷಿ ಕಾಯ್ದೆಗಳ ಮೂಲಕ ರೈತರನ್ನು ಒಕ್ಕಲೆ ಬ್ಬಿಸುವ ಜತೆಗೆ ಬಡವರ ಬದುಕು ಕಿತ್ತುಕೊಳ್ಳಲು ಯತ್ನಿಸಿತು ಎಂದರು.</p>.<p>ನಿರಂತರ ಬೆಲೆ ಏರಿಕೆಯಿಂದ ಬಡವರು ಬದುಕು ನಡೆಸುವುದು ಕಷ್ಟ ವಾಗಿದೆ. ಕೇಂದ್ರ ಸರ್ಕಾರ ಏನು ನಡೆ ದಿಲ್ಲ ಎನ್ನುವಂತೆ ವರ್ತಿಸುತ್ತಿದೆ ಎಂದರು.</p>.<p>ಸಿಐಟಿಯು ತಾಲ್ಲೂಕು ಅಧ್ಯಕ್ಷೆ ರಂಗಮ್ಮ ಅನ್ವರ್, ಮುಖಂಡರಾದ ರಮಾ ದೇವಿ, ಮರಿಯಮ್ಮ, ಯೂಸೂಫ್, ಮನೋಹರ್, ಶ್ರೀಲೇಖಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>