<p>ಸಿಂಧನೂರು: ಅಮೆರಿಕಾದ ಚಿಕಾಗೊ ನಗರದಲ್ಲಿನ ಮಹಿಳಾ ಕಾರ್ಮಿಕರ ತ್ಯಾಗದ ಸಂಕೇತವೇ ‘ಮೇ ದಿನ’ (ಮೇ ಡೇ) ಉದ್ದೇಶವಾಗಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ ಹೇಳಿದರು.</p>.<p>ಶ್ರಮಜೀವಿ ಎಪಿಎಂಸಿ ಹಮಾಲರ ಸಂಘದ ಕಾರ್ಯಾಲಯದಲ್ಲಿ ಭಾನು ವಾರ ನಡೆದ ಮೇ ಡೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತ್ಯಾಗ ಮತ್ತು ಬಲಿದಾನಗಳ ಮೂಲಕ ಪಡೆದ ಕಾರ್ಮಿಕರ ಕಾನೂನುಗಳಿಗೆ ಸರ್ಕಾರಗಳಿಂದ ಧಕ್ಕೆ ಆಗುತ್ತಿದೆ. ಕಾರ್ಮಿಕರು ಮರಳಿ ತಮ್ಮ ಹಕ್ಕು ಪಡೆಯಲು ಮತ್ತೆ ಚಳವಳಿಯ ದಾರಿ ಹಿಡಿಯಬೇಕಾಗಿದೆ ಎಂದರು.</p>.<p>ಪ್ರಗತಿಪರ ಮುಖಂಡ ಎಚ್.ಎನ್.ಬಡಿಗೇರ್ ಮಾತನಾಡಿ, ಸಮಾಜದ ಸಮಾನತೆಗೆ ಆಳುವ ವರ್ಗದ ಸರ್ಕಾ ರಗಳು ಕಂಟಕಪ್ರಾಯವಾಗಿವೆ ಎಂದು ಹೇಳಿದರು.</p>.<p>ದಲಿತ ಹಿಂದುಳಿದ ಅಲ್ಪಸಂಖ್ಯಾತ ಪ್ರಗತಿಪರ ಒಕ್ಕೂಟದ ಪ್ರಧಾನ ಸಂಚಾಲಕ ಜೆ.ರಾಯಪ್ಪ, ಸಂಘದ ಗೌರವಾಧ್ಯಕ್ಷ ಎಂ.ಗಂಗಾಧರ ಮಾತನಾಡಿದರು.</p>.<p>ಸಂಘದ ಕಾರ್ಯದರ್ಶಿ ಎಚ್.ಆರ್ ಹೊಸಮನಿ, ನಾಗಪ್ಪ ಉಮಲೂಟಿ, ತಿಮ್ಮಣ್ಣ ಯಾದವ್ ಯಲ್ಲಪ್ಪ ಗೋಮರ್ಸಿ, ಮುದಿಯಪ್ಪ, ಪರಸಪ್ಪ, ಬಸವರಾಜ, ಇದ್ದರು.</p>.<p>ಸಂಘದ ಅಧ್ಯಕ್ಷ ಮಾಬುಸಾಬ ಬೆಳ್ಳಟ್ಟಿ ಧ್ವಜಾರೋಹಣ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ಅಮೆರಿಕಾದ ಚಿಕಾಗೊ ನಗರದಲ್ಲಿನ ಮಹಿಳಾ ಕಾರ್ಮಿಕರ ತ್ಯಾಗದ ಸಂಕೇತವೇ ‘ಮೇ ದಿನ’ (ಮೇ ಡೇ) ಉದ್ದೇಶವಾಗಿದೆ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ ಹೇಳಿದರು.</p>.<p>ಶ್ರಮಜೀವಿ ಎಪಿಎಂಸಿ ಹಮಾಲರ ಸಂಘದ ಕಾರ್ಯಾಲಯದಲ್ಲಿ ಭಾನು ವಾರ ನಡೆದ ಮೇ ಡೇ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ತ್ಯಾಗ ಮತ್ತು ಬಲಿದಾನಗಳ ಮೂಲಕ ಪಡೆದ ಕಾರ್ಮಿಕರ ಕಾನೂನುಗಳಿಗೆ ಸರ್ಕಾರಗಳಿಂದ ಧಕ್ಕೆ ಆಗುತ್ತಿದೆ. ಕಾರ್ಮಿಕರು ಮರಳಿ ತಮ್ಮ ಹಕ್ಕು ಪಡೆಯಲು ಮತ್ತೆ ಚಳವಳಿಯ ದಾರಿ ಹಿಡಿಯಬೇಕಾಗಿದೆ ಎಂದರು.</p>.<p>ಪ್ರಗತಿಪರ ಮುಖಂಡ ಎಚ್.ಎನ್.ಬಡಿಗೇರ್ ಮಾತನಾಡಿ, ಸಮಾಜದ ಸಮಾನತೆಗೆ ಆಳುವ ವರ್ಗದ ಸರ್ಕಾ ರಗಳು ಕಂಟಕಪ್ರಾಯವಾಗಿವೆ ಎಂದು ಹೇಳಿದರು.</p>.<p>ದಲಿತ ಹಿಂದುಳಿದ ಅಲ್ಪಸಂಖ್ಯಾತ ಪ್ರಗತಿಪರ ಒಕ್ಕೂಟದ ಪ್ರಧಾನ ಸಂಚಾಲಕ ಜೆ.ರಾಯಪ್ಪ, ಸಂಘದ ಗೌರವಾಧ್ಯಕ್ಷ ಎಂ.ಗಂಗಾಧರ ಮಾತನಾಡಿದರು.</p>.<p>ಸಂಘದ ಕಾರ್ಯದರ್ಶಿ ಎಚ್.ಆರ್ ಹೊಸಮನಿ, ನಾಗಪ್ಪ ಉಮಲೂಟಿ, ತಿಮ್ಮಣ್ಣ ಯಾದವ್ ಯಲ್ಲಪ್ಪ ಗೋಮರ್ಸಿ, ಮುದಿಯಪ್ಪ, ಪರಸಪ್ಪ, ಬಸವರಾಜ, ಇದ್ದರು.</p>.<p>ಸಂಘದ ಅಧ್ಯಕ್ಷ ಮಾಬುಸಾಬ ಬೆಳ್ಳಟ್ಟಿ ಧ್ವಜಾರೋಹಣ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>