ರಾಯಚೂರು: ರಾಯಚೂರು ವಿಮಾನ ನಿಲ್ದಾಣದಲ್ಲಿನ ಅತಿಕ್ರಮಣ ತೆರವುಗೊಳಿಸದೇ, ಅಗತ್ಯವಿರುವಷ್ಟು ಜಮೀನನ್ನೂ ಸ್ವಾಧೀನ ಪಡಿಸಿಕೊಳ್ಳದೇ ₹ 180 ಕೋಟಿ ವೆಚ್ಚದ ಕಾಮಗಾರಿಗೆ ಟೆಂಡರ್ ಕರೆದಿರುವುದನ್ನು ಪ್ರಸ್ತಾಪಿಸಿ ಸಣ್ಣ ನೀರವಾರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಅಧಿಕಾರಿಗಳ ಬೆವರಿಳಿಸಿದರು.