<p><strong>ರಾಯಚೂರು</strong>: ‘ಜಗನ್ನಾಥದಾಸರು ಜಾತಿ, ಮತ ಪಂಥ ಎನ್ನದೆ ಜನಸಾಮಾನ್ಯರಿಗೆ ಹಾಗೂ ದೀನ ದಲಿತರಿಗೆ ಹರಿದಾಸ ದೀಕ್ಷೆ ನೀಡಿದ್ದರು. ಹರಿದಾಸ ಸಾಹಿತ್ಯದ ಪರಂಪರೆಯನ್ನು ಹಾಗೂ ಭಕ್ತಿ ಪಂಥವನ್ನು ಬೆಳೆಸಿದ ಶ್ರೇಷ್ಠ ಹರಿದಾಸರಾಗಿದ್ದಾರೆ’ ಎಂದು ಶೃತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಹೇಳಿದರು.</p>.<p>ಇಲ್ಲಿಯ ಜವಾಹರ ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಗುರು ಜಗನ್ನಾಥ ದಾಸರ 107ನೇ ಮಧ್ಯಾರಾದನೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. </p>.<p>‘ರಾಘವೇಂದ್ರ ಗುರು ಸಾರ್ವಭೌಮರ ಪರಮ ಭಕ್ತರಾದ ಇವರು ರಾಯರ ಕುರಿತು 200ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಸಂಸ್ಕೃತದಲ್ಲಿ ಎರಡು ಗ್ರಂಥ, ಕನ್ನಡದಲ್ಲಿ 50 ಕೃತಿಗಳನ್ನು ರಚಿಸಿ ದಾಸ ಸಾಹಿತ್ಯಕ್ಕೆ ವಿಶಿಷ್ಟವಾದ ಕೊಡುಗೆಯನ್ನು ನೀಡಿದ್ದಾರೆ’ ಎಂದು ಹೇಳಿದರು.</p>.<p>ಕಲಾವಿದ ಸುರೇಶ ಕಲ್ಲೂರ್ ಕಾರ್ಯಕ್ರಮ ಉದ್ಘಾಟಿಸಿದರು. ದಾಸರ ಭಾವಚಿತ್ರಕ್ಕೆ ಅರ್ಚಕರಾದ ಶ್ರೀಧರಾಚಾರ್ಯ ಮಂಗಲಿ ಅವರು ಪೂಜೆ ಸಲ್ಲಿಸಿದರು. ಪತ್ರಕರ್ತ ಜಯಕುಮಾರ ದೇಸಾಯಿ ಕಾಡ್ಲೂರು ಮಾತನಾಡಿದರು.</p>.<p>ಮಾರುತಿ ಭಜನಾ ಮಂಡಳಿಯ ಅಧ್ಯಕ್ಷ ವೆಂಕಟೇಶ್ ಕೋಲಾರ, ಕೃಷ್ಣಮೂರ್ತಿ ಹುಣಸಿಗಿ, ನರಸಿಂಹ, ನಿವೃತ್ತ ಶಿಕ್ಷಕಿ ನಾಗರತ್ನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ‘ಜಗನ್ನಾಥದಾಸರು ಜಾತಿ, ಮತ ಪಂಥ ಎನ್ನದೆ ಜನಸಾಮಾನ್ಯರಿಗೆ ಹಾಗೂ ದೀನ ದಲಿತರಿಗೆ ಹರಿದಾಸ ದೀಕ್ಷೆ ನೀಡಿದ್ದರು. ಹರಿದಾಸ ಸಾಹಿತ್ಯದ ಪರಂಪರೆಯನ್ನು ಹಾಗೂ ಭಕ್ತಿ ಪಂಥವನ್ನು ಬೆಳೆಸಿದ ಶ್ರೇಷ್ಠ ಹರಿದಾಸರಾಗಿದ್ದಾರೆ’ ಎಂದು ಶೃತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಹೇಳಿದರು.</p>.<p>ಇಲ್ಲಿಯ ಜವಾಹರ ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ಏರ್ಪಡಿಸಿದ್ದ ಗುರು ಜಗನ್ನಾಥ ದಾಸರ 107ನೇ ಮಧ್ಯಾರಾದನೆಯ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. </p>.<p>‘ರಾಘವೇಂದ್ರ ಗುರು ಸಾರ್ವಭೌಮರ ಪರಮ ಭಕ್ತರಾದ ಇವರು ರಾಯರ ಕುರಿತು 200ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಸಂಸ್ಕೃತದಲ್ಲಿ ಎರಡು ಗ್ರಂಥ, ಕನ್ನಡದಲ್ಲಿ 50 ಕೃತಿಗಳನ್ನು ರಚಿಸಿ ದಾಸ ಸಾಹಿತ್ಯಕ್ಕೆ ವಿಶಿಷ್ಟವಾದ ಕೊಡುಗೆಯನ್ನು ನೀಡಿದ್ದಾರೆ’ ಎಂದು ಹೇಳಿದರು.</p>.<p>ಕಲಾವಿದ ಸುರೇಶ ಕಲ್ಲೂರ್ ಕಾರ್ಯಕ್ರಮ ಉದ್ಘಾಟಿಸಿದರು. ದಾಸರ ಭಾವಚಿತ್ರಕ್ಕೆ ಅರ್ಚಕರಾದ ಶ್ರೀಧರಾಚಾರ್ಯ ಮಂಗಲಿ ಅವರು ಪೂಜೆ ಸಲ್ಲಿಸಿದರು. ಪತ್ರಕರ್ತ ಜಯಕುಮಾರ ದೇಸಾಯಿ ಕಾಡ್ಲೂರು ಮಾತನಾಡಿದರು.</p>.<p>ಮಾರುತಿ ಭಜನಾ ಮಂಡಳಿಯ ಅಧ್ಯಕ್ಷ ವೆಂಕಟೇಶ್ ಕೋಲಾರ, ಕೃಷ್ಣಮೂರ್ತಿ ಹುಣಸಿಗಿ, ನರಸಿಂಹ, ನಿವೃತ್ತ ಶಿಕ್ಷಕಿ ನಾಗರತ್ನ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>