<p>ಜಾಲಹಳ್ಳಿ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶುಕ್ರವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದೆ ಎಂದು ಚುನಾವಣಾಧಿಕಾರಿ ಅಮರೇಶ ತಿಳಿಸಿದ್ದಾರೆ.</p>.<p>ಅಧ್ಯಕ್ಷ ಸ್ಥಾನಕ್ಕೆ ನಿರ್ದೇಶಕ ಗೋವಿಂದಪ್ಪ ನಾಯಕ ಹಲಗೇರಿ ಒಬ್ಬರೇ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. </p>.<p>ಉಪಾಧ್ಯಕ್ಷ ಸ್ಥಾನಕ್ಕೆ ಖುರ್ಷಿದ್ ಪಟೇಲ್, ಸುರೇಶ ವಿಭೂತಿ ನಾಮಪತ್ರ ಸಲ್ಲಿಸಿದ್ದರು. ಒಟ್ಟು 12 ಜನ ನಿರ್ದೇಶಕರು, ತಾಲ್ಲೂಕು ಸಹಕಾರ ಸಂಘದ ಪ್ರತಿನಿಧಿ ಒಬ್ಬರು ಮತದಾನಕ್ಕೆ ಬಂದಿದ್ದರು. ಖುರ್ಷಿದ್ ಪಟೇಲ್ 10 ಮತ ಪಡೆದು ಗೆಲವು ತಮ್ಮದಾಗಿಸಿಕೊಂಡರು.</p>.<p>ಈ ಹಿಂದಿನ ಅಡಳಿತ ಮಂಡಳಿ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆದಿರುವುದರಿಂದ ಮುಂದಿನ 6 ವರ್ಷ ಹಿಂದಿನ ನಿರ್ದೇಶಕರು ಸಹಕಾರ ಸಂಘದ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಕಲಬುರಗಿ ಹೈಕೋರ್ಟ್ ಪೀಠ ಆದೇಶ ನೀಡಿತ್ತು. ಆ ತಪ್ಪನ್ನು ನೂತನ ಆಡಳಿತ ಮಂಡಳಿ ಮಾಡದೇ ಸರಿಯಾಗಿ ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ವಿತರಣೆ ಮಾಡಬೇಕು ಎಂದು ಮುದ್ದಪ್ಪ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-32-1071079901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಲಹಳ್ಳಿ: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಶುಕ್ರವಾರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗಿದೆ ಎಂದು ಚುನಾವಣಾಧಿಕಾರಿ ಅಮರೇಶ ತಿಳಿಸಿದ್ದಾರೆ.</p>.<p>ಅಧ್ಯಕ್ಷ ಸ್ಥಾನಕ್ಕೆ ನಿರ್ದೇಶಕ ಗೋವಿಂದಪ್ಪ ನಾಯಕ ಹಲಗೇರಿ ಒಬ್ಬರೇ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು. </p>.<p>ಉಪಾಧ್ಯಕ್ಷ ಸ್ಥಾನಕ್ಕೆ ಖುರ್ಷಿದ್ ಪಟೇಲ್, ಸುರೇಶ ವಿಭೂತಿ ನಾಮಪತ್ರ ಸಲ್ಲಿಸಿದ್ದರು. ಒಟ್ಟು 12 ಜನ ನಿರ್ದೇಶಕರು, ತಾಲ್ಲೂಕು ಸಹಕಾರ ಸಂಘದ ಪ್ರತಿನಿಧಿ ಒಬ್ಬರು ಮತದಾನಕ್ಕೆ ಬಂದಿದ್ದರು. ಖುರ್ಷಿದ್ ಪಟೇಲ್ 10 ಮತ ಪಡೆದು ಗೆಲವು ತಮ್ಮದಾಗಿಸಿಕೊಂಡರು.</p>.<p>ಈ ಹಿಂದಿನ ಅಡಳಿತ ಮಂಡಳಿ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆದಿರುವುದರಿಂದ ಮುಂದಿನ 6 ವರ್ಷ ಹಿಂದಿನ ನಿರ್ದೇಶಕರು ಸಹಕಾರ ಸಂಘದ ಯಾವುದೇ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಕಲಬುರಗಿ ಹೈಕೋರ್ಟ್ ಪೀಠ ಆದೇಶ ನೀಡಿತ್ತು. ಆ ತಪ್ಪನ್ನು ನೂತನ ಆಡಳಿತ ಮಂಡಳಿ ಮಾಡದೇ ಸರಿಯಾಗಿ ರೈತರಿಗೆ, ಸಣ್ಣ ವ್ಯಾಪಾರಿಗಳಿಗೆ ಸಾಲ ವಿತರಣೆ ಮಾಡಬೇಕು ಎಂದು ಮುದ್ದಪ್ಪ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-32-1071079901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>