<p><strong>ಜಾಲಹಳ್ಳಿ:</strong> ಪಟ್ಟಣದ ಆರಾಧ್ಯ ದೈವ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನ ಆವರಣದಲ್ಲಿ ಶನಿವಾರ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 62 ಜೋಡಿ ಸತಿ ಪತಿಗಳಾದರು.</p><p>ಕಾರ್ಯಕ್ರಮದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಮಾತನಾಡಿ, ‘ಜನ ನಮ್ಮ ಮೇಲೆ ತುಂಬಾ ಭರವಸೆ ಇಟ್ಟು ಆಯ್ಕೆ ಮಾಡಿದ್ದೀರಿ. ನಿಮ್ಮ ನಂಬಿಕೆಗೆ ದ್ರೋಹ ಮಾಡದೇ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜನರ ಸೇವಕಿಯಾಗಿ ಕೆಲಸ ಮಾಡುತ್ತೇನೆ’ ಎಂದರು.</p><p>‘ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯಕ್ಕೆ ಬೇಕಾಗಿರುವ ಅನುದಾನ ಕಲ್ಪಿಸಲಾಗುವುದು’ ಎಂದು ಹೇಳಿದರು.</p><p>ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಇಂದಿರಾ ಮಾತನಾಡಿ, ‘ಸಾಮೂಹಿಕ ವಿವಾಹ 2013ರಲ್ಲಿ ಕೇವಲ 5 ಜೋಡಿಗಳಿಂದ ಪ್ರಾರಂಭಗೊಂಡು ಈಗ 62 ಜೋಡಿಗಳವರೆಗೆ ಮಾಡಿರುವುದು ಕ್ರಾಂತಿಕಾರಿ ಕೆಲಸವಾಗಿದೆ. ಇಲ್ಲಿ ಮದುವೆ ಮಾಡಿಕೊಳ್ಳುವುದರಿಂದ ಸಮಾನತೆಯ ಭಾವ ಮೂಡುತ್ತದೆ. ಎಲ್ಲಾ ಸಮಾಜದ ಸ್ವಾಮೀಜಿಗಳು ಹಾಗೂ ಎಲ್ಲಾ ವರ್ಗದ ಜನರ ಆಶೀರ್ವಾದ ಸಿಗುತ್ತದೆ’ ಎಂದು ಹೇಳಿದರು.</p><p>‘ನವ ಜೋಡಿಗಳು ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ, ಅದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಾಮೂಹಿಕ ವಿವಾಹ ನಡೆಸಲಾಗಿದೆ. ಯಾವುದೇ ಕಾರಣಕ್ಕೂ ಡಿ.ಜೆ ಹಚ್ಚಿಕೊಂಡು ಮೆರವಣಿಗೆ ಮಾಡಬೇಡಿ’ ಎಂದು ಸಲಹೆ ನೀಡಿದರು.</p><p>ಪಟ್ಟಣದ ಜಯಶಾಂತಲಿಂಗೇಶ್ವರ ಸ್ವಾಮೀಜಿ, ವೀರಗೋಟದ ಅಡವಿಲಿಂಗ ಸ್ವಾಮೀಜಿ, ಮಂದಕಲ್ ಮಠದ ಬಸವರಾಜಗುರು ಸ್ವಾಮೀಜಿ, ಮುಂಡರಗಿ ದೇವಸ್ಥಾನದ ಪೂಜಾರಿ ಸಾನ್ನಿಧ್ಯ ವಹಿಸಿದ್ದರು.</p><p>ಗ್ರಾ.ಪಂ ಅಧ್ಯಕ್ಷೆ ವಿಜಯಲಕ್ಷ್ಮಿ ತೋಟದ್, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ರಾಜಶೇಖರ ನಾಯಕ, ಗೋವಿಂದ ಸೇವಾ ಸಮಿತಿಯ ಗೌರವ ಅಧ್ಯಕ್ಷ ವೆಂಕೋಬ ಪೂಜಾರಿ, ಅಧ್ಯಕ್ಷ ಚಂದ್ರಕಾಂತ ಚಿಕ್ಕಲ್, ಕಾರ್ಯದರ್ಶಿ ಮುದ್ದರಂಗಪ್ಪ ನಾಯಕ ಕ್ಯಾದಗೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p><p>ಬೆಳಿಗ್ಗೆ ಎಲ್ಲಾ ಭಕ್ತರಿಗೆ ಉಪ್ಪಿಟ್ಟು, ಮಧ್ಯಾಹ್ನ ಬೂಂದಿ, ಸಜ್ಜೆ ರೊಟ್ಟಿ, ಪುಂಡಿಪಲ್ಲೆ, ಶೇಂಗಾ ಇಂಡಿ, ಅನ್ನ–ಸಾಂಬಾರು ವ್ಯವಸ್ಥೆ ಮಾಡಲಾಗಿತ್ತು. ಶಾಸಕಿ ಕರೆಮ್ಮ ಜಿ.ನಾಯಕ ಸಾರ್ವಜನಿಕರೊಂದಿಗೆ ಊಟ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ:</strong> ಪಟ್ಟಣದ ಆರಾಧ್ಯ ದೈವ ಲಕ್ಷ್ಮಿ ರಂಗನಾಥ ಸ್ವಾಮಿ ದೇವಸ್ಥಾನ ಆವರಣದಲ್ಲಿ ಶನಿವಾರ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 62 ಜೋಡಿ ಸತಿ ಪತಿಗಳಾದರು.</p><p>ಕಾರ್ಯಕ್ರಮದಲ್ಲಿ ಶಾಸಕಿ ಕರೆಮ್ಮ ಜಿ.ನಾಯಕ ಮಾತನಾಡಿ, ‘ಜನ ನಮ್ಮ ಮೇಲೆ ತುಂಬಾ ಭರವಸೆ ಇಟ್ಟು ಆಯ್ಕೆ ಮಾಡಿದ್ದೀರಿ. ನಿಮ್ಮ ನಂಬಿಕೆಗೆ ದ್ರೋಹ ಮಾಡದೇ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಜನರ ಸೇವಕಿಯಾಗಿ ಕೆಲಸ ಮಾಡುತ್ತೇನೆ’ ಎಂದರು.</p><p>‘ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಅಗತ್ಯ ಸೌಲಭ್ಯಕ್ಕೆ ಬೇಕಾಗಿರುವ ಅನುದಾನ ಕಲ್ಪಿಸಲಾಗುವುದು’ ಎಂದು ಹೇಳಿದರು.</p><p>ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಇಂದಿರಾ ಮಾತನಾಡಿ, ‘ಸಾಮೂಹಿಕ ವಿವಾಹ 2013ರಲ್ಲಿ ಕೇವಲ 5 ಜೋಡಿಗಳಿಂದ ಪ್ರಾರಂಭಗೊಂಡು ಈಗ 62 ಜೋಡಿಗಳವರೆಗೆ ಮಾಡಿರುವುದು ಕ್ರಾಂತಿಕಾರಿ ಕೆಲಸವಾಗಿದೆ. ಇಲ್ಲಿ ಮದುವೆ ಮಾಡಿಕೊಳ್ಳುವುದರಿಂದ ಸಮಾನತೆಯ ಭಾವ ಮೂಡುತ್ತದೆ. ಎಲ್ಲಾ ಸಮಾಜದ ಸ್ವಾಮೀಜಿಗಳು ಹಾಗೂ ಎಲ್ಲಾ ವರ್ಗದ ಜನರ ಆಶೀರ್ವಾದ ಸಿಗುತ್ತದೆ’ ಎಂದು ಹೇಳಿದರು.</p><p>‘ನವ ಜೋಡಿಗಳು ಬುದ್ಧ, ಬಸವ, ಅಂಬೇಡ್ಕರ್ ಅವರ ತತ್ವ, ಅದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. ದುಂದುವೆಚ್ಚಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಾಮೂಹಿಕ ವಿವಾಹ ನಡೆಸಲಾಗಿದೆ. ಯಾವುದೇ ಕಾರಣಕ್ಕೂ ಡಿ.ಜೆ ಹಚ್ಚಿಕೊಂಡು ಮೆರವಣಿಗೆ ಮಾಡಬೇಡಿ’ ಎಂದು ಸಲಹೆ ನೀಡಿದರು.</p><p>ಪಟ್ಟಣದ ಜಯಶಾಂತಲಿಂಗೇಶ್ವರ ಸ್ವಾಮೀಜಿ, ವೀರಗೋಟದ ಅಡವಿಲಿಂಗ ಸ್ವಾಮೀಜಿ, ಮಂದಕಲ್ ಮಠದ ಬಸವರಾಜಗುರು ಸ್ವಾಮೀಜಿ, ಮುಂಡರಗಿ ದೇವಸ್ಥಾನದ ಪೂಜಾರಿ ಸಾನ್ನಿಧ್ಯ ವಹಿಸಿದ್ದರು.</p><p>ಗ್ರಾ.ಪಂ ಅಧ್ಯಕ್ಷೆ ವಿಜಯಲಕ್ಷ್ಮಿ ತೋಟದ್, ಜಿಲ್ಲಾ ಸಹಕಾರ ಬ್ಯಾಂಕ್ ನಿರ್ದೇಶಕ ರಾಜಶೇಖರ ನಾಯಕ, ಗೋವಿಂದ ಸೇವಾ ಸಮಿತಿಯ ಗೌರವ ಅಧ್ಯಕ್ಷ ವೆಂಕೋಬ ಪೂಜಾರಿ, ಅಧ್ಯಕ್ಷ ಚಂದ್ರಕಾಂತ ಚಿಕ್ಕಲ್, ಕಾರ್ಯದರ್ಶಿ ಮುದ್ದರಂಗಪ್ಪ ನಾಯಕ ಕ್ಯಾದಗೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.</p><p>ಬೆಳಿಗ್ಗೆ ಎಲ್ಲಾ ಭಕ್ತರಿಗೆ ಉಪ್ಪಿಟ್ಟು, ಮಧ್ಯಾಹ್ನ ಬೂಂದಿ, ಸಜ್ಜೆ ರೊಟ್ಟಿ, ಪುಂಡಿಪಲ್ಲೆ, ಶೇಂಗಾ ಇಂಡಿ, ಅನ್ನ–ಸಾಂಬಾರು ವ್ಯವಸ್ಥೆ ಮಾಡಲಾಗಿತ್ತು. ಶಾಸಕಿ ಕರೆಮ್ಮ ಜಿ.ನಾಯಕ ಸಾರ್ವಜನಿಕರೊಂದಿಗೆ ಊಟ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>