<p>ಜಾಲಹಳ್ಳಿ: ರಾಯಚೂರು ಉಪವಿಭಾಗಾಧಿಕಾರಿ ಗಜಾನನ ಬಾಳೆ ಅವರು ಪಟ್ಟಣದ ವಿವಿಧ ವಾರ್ಡ್ಗಳಿಗೆ ಶುಕ್ರವಾರ ಸಂಜೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.</p>.<p>ದೇವದುರ್ಗ ಹಾಗೂ ಅರಕೇರಾ ತಾಲ್ಲೂಕಿಗೆ ಜಿಲ್ಲಾಮಟ್ಟದ ಕುಡಿಯುವ ನೀರಿನ ನೋಡಲ್ ಅಧಿಕಾರಿಯೂ ಆಗಿರುವ ಗಜಾನನ ಬಾಳೆ ಅವರು, ಬೇಸಿಗೆಯ ಕಾರಣ ಕುಡಿಯುವ ನೀರಿನ ಯೋಜನೆಗಳ ಸ್ಥಿತಿಗತಿಗಳ ಸ್ಥಳ ಪರಿಶೀಲನೆ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ವಿಭಾಗದ ಸಹಾಯಕ ಎಂಜಿನಿಯರ್ ಹೀರಾಲಾಲ್, ಕಿರಿಯ ಎಂಜಿನಿಯರ್ ಜೈಧರ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾ.ಪಂ ಇಒ ಬಸವರಾಜ ಹಟ್ಟಿ, ಪಿಡಿಒ ನರಸಪ್ಪ ಉಪಸ್ಥಿತರಿದ್ದರು.</p>.<p>‘ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 2004–05ನೇ ಸಾಲಿನಲ್ಲಿ ರಾಜೀವ್ಗಾಂಧಿ ಟೆಕ್ನಾಲಜಿ ಅಡಿ ಸುಮಾರು ₹4 ಕೋಟಿ ವೆಚ್ಚದಲ್ಲಿ ಲಿಂಗದಹಳ್ಳಿ ಹತ್ತಿರ ಕೃಷ್ಣಾ ನದಿಯಿಂದ ಜಾಲಹಳ್ಳಿ ಮತ್ತು ಲಿಂಗದಹಳ್ಳಿ ಗ್ರಾಮಗಳಿಗೆ ಶುದ್ಧ ನೀರು ಸರಬರಾಜು ಮಾಡುವ ಘಟಕ ಸ್ಥಾಪಿಸಲಾಗಿತ್ತು. 20 ವರ್ಷ ಕಳೆದರೂ ಜನ ನದಿಯ ನೀರು ಬಳಕೆ ಮಾಡಿಲ್ಲ ಮತ್ತು ಕುಡಿದಿಲ್ಲ. ಆದರೂ ಆ ಘಟಕ ನಿರ್ವಹಣೆಗೆ ಜಿಲ್ಲಾ ಪಂಚಾಯಿತಿಯು ಪ್ರತಿ ವರ್ಷ ಲಕ್ಷಾಂತರ ಹಣ ವೆಚ್ಚ ಮಾಡುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಅಮರೇಶ ನಾಯಕ ಮತ್ತು ಗ್ರಾಮಸ್ಥರು ಆರೋಪಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಲಹಳ್ಳಿ: ರಾಯಚೂರು ಉಪವಿಭಾಗಾಧಿಕಾರಿ ಗಜಾನನ ಬಾಳೆ ಅವರು ಪಟ್ಟಣದ ವಿವಿಧ ವಾರ್ಡ್ಗಳಿಗೆ ಶುಕ್ರವಾರ ಸಂಜೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಪರಿಶೀಲಿಸಿದರು.</p>.<p>ದೇವದುರ್ಗ ಹಾಗೂ ಅರಕೇರಾ ತಾಲ್ಲೂಕಿಗೆ ಜಿಲ್ಲಾಮಟ್ಟದ ಕುಡಿಯುವ ನೀರಿನ ನೋಡಲ್ ಅಧಿಕಾರಿಯೂ ಆಗಿರುವ ಗಜಾನನ ಬಾಳೆ ಅವರು, ಬೇಸಿಗೆಯ ಕಾರಣ ಕುಡಿಯುವ ನೀರಿನ ಯೋಜನೆಗಳ ಸ್ಥಿತಿಗತಿಗಳ ಸ್ಥಳ ಪರಿಶೀಲನೆ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಗ್ರಾಮೀಣ ಕುಡಿಯುವ ನೀರು ವಿಭಾಗದ ಸಹಾಯಕ ಎಂಜಿನಿಯರ್ ಹೀರಾಲಾಲ್, ಕಿರಿಯ ಎಂಜಿನಿಯರ್ ಜೈಧರ್, ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ, ತಾ.ಪಂ ಇಒ ಬಸವರಾಜ ಹಟ್ಟಿ, ಪಿಡಿಒ ನರಸಪ್ಪ ಉಪಸ್ಥಿತರಿದ್ದರು.</p>.<p>‘ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ 2004–05ನೇ ಸಾಲಿನಲ್ಲಿ ರಾಜೀವ್ಗಾಂಧಿ ಟೆಕ್ನಾಲಜಿ ಅಡಿ ಸುಮಾರು ₹4 ಕೋಟಿ ವೆಚ್ಚದಲ್ಲಿ ಲಿಂಗದಹಳ್ಳಿ ಹತ್ತಿರ ಕೃಷ್ಣಾ ನದಿಯಿಂದ ಜಾಲಹಳ್ಳಿ ಮತ್ತು ಲಿಂಗದಹಳ್ಳಿ ಗ್ರಾಮಗಳಿಗೆ ಶುದ್ಧ ನೀರು ಸರಬರಾಜು ಮಾಡುವ ಘಟಕ ಸ್ಥಾಪಿಸಲಾಗಿತ್ತು. 20 ವರ್ಷ ಕಳೆದರೂ ಜನ ನದಿಯ ನೀರು ಬಳಕೆ ಮಾಡಿಲ್ಲ ಮತ್ತು ಕುಡಿದಿಲ್ಲ. ಆದರೂ ಆ ಘಟಕ ನಿರ್ವಹಣೆಗೆ ಜಿಲ್ಲಾ ಪಂಚಾಯಿತಿಯು ಪ್ರತಿ ವರ್ಷ ಲಕ್ಷಾಂತರ ಹಣ ವೆಚ್ಚ ಮಾಡುತ್ತಿದೆ’ ಎಂದು ಸಾಮಾಜಿಕ ಕಾರ್ಯಕರ್ತ ಅಮರೇಶ ನಾಯಕ ಮತ್ತು ಗ್ರಾಮಸ್ಥರು ಆರೋಪಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>