<p>ಜಾಲಹಳ್ಳಿ: ದೇವದುರ್ಗ ತಾಲ್ಲೂಕಿನ ಮಹಿಳೆಯೊಬ್ಬರು ಶನಿವಾರ ಬೆಳಿಗ್ಗೆ ಬಳ್ಳಾರಿಯಿಂದ ತಿಂಥಣಿ ಬ್ರಿಜ್ ಮೂಲಕ ದೇವದುರ್ಗಕ್ಕೆ ಬರುತ್ತಿರುವ ಸಮಯದಲ್ಲಿ ಬ್ಯಾಗ್ನಲ್ಲಿಟ್ಟಿದ್ದ 50 ಗ್ರಾಂ ಚಿನ್ನದ ಎರಡು ಸರಗಳನ್ನು ಕಳವು ಮಾಡಲಾಗಿದೆ.</p>.<p>ಬೆಳಿಗ್ಗೆ 10.30ಕ್ಕೆ ತಿಂಥಣಿ ಬ್ರಿಜ್ನಿಂದ ದೇವದುರ್ಗಕ್ಕೆ ಬರುವಾಗ ಬಸ್ ಹತ್ತುವ ಸಂದರ್ಭದಲ್ಲಿ ಕಳ್ಳರು ಕಳವು ಮಾಡಿದ್ದಾರೆ. ತಕ್ಷಣವೇ ಎಚ್ಚೆತ್ತ ಮಹಿಳೆ ಪತಿಗೆ ವಿಷಯ ತಿಳಿಸಿದ್ದಾರೆ. ಬಸ್ನಲ್ಲಿರುವ ಪ್ರಯಾಣಿಕರನ್ನು ವಿಚಾರಿಸಿದರೂ ಪ್ರಯೋಜನವಾಗಿಲ್ಲ.</p>.<p>ನಂತರ ಜಾಲಹಳ್ಳಿ ಪಟ್ಟಣದ ಪೊಲೀಸ್ ಠಾಣೆಗೆ ಬಸ್ ಕರೆತಂದು ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರ ಬ್ಯಾಗ್ಗಳನ್ನು ಪರಿಶೀಲಿಸಿದರೂ ಚಿನ್ನದ ಸರಗಳು ಸಿಕ್ಕಿಲ್ಲ. ಈ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.</p>.<p>‘ತಿಂಥಣಿ ಬ್ರಿಜ್ ದೇವದುರ್ಗ ತಾಲ್ಲೂಕಿಗೆ ಸೇರಿದ್ದು, ಲಿಂಗಸೂಗೂರು, ಸುರಪುರ, ದೇವದುರ್ಗ ತಾಲ್ಲೂಕುಗಳ ಸಂಪರ್ಕ ಕಲ್ಪಿಸುವ ಕೇಂದ್ರ. ಇಲ್ಲಿ ನಿತ್ಯ ಒಂದಿಲ್ಲ ವಸ್ತುಗಳ ಕಳವು ನಡೆಯುತ್ತದೆ. ಆದರೆ, ಕೆಲವರು ಮಾತ್ರ ದೂರು ನೀಡುತ್ತಾರೆ’ ಎಂದು ಆರೋಪ ಕೇಳಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಲಹಳ್ಳಿ: ದೇವದುರ್ಗ ತಾಲ್ಲೂಕಿನ ಮಹಿಳೆಯೊಬ್ಬರು ಶನಿವಾರ ಬೆಳಿಗ್ಗೆ ಬಳ್ಳಾರಿಯಿಂದ ತಿಂಥಣಿ ಬ್ರಿಜ್ ಮೂಲಕ ದೇವದುರ್ಗಕ್ಕೆ ಬರುತ್ತಿರುವ ಸಮಯದಲ್ಲಿ ಬ್ಯಾಗ್ನಲ್ಲಿಟ್ಟಿದ್ದ 50 ಗ್ರಾಂ ಚಿನ್ನದ ಎರಡು ಸರಗಳನ್ನು ಕಳವು ಮಾಡಲಾಗಿದೆ.</p>.<p>ಬೆಳಿಗ್ಗೆ 10.30ಕ್ಕೆ ತಿಂಥಣಿ ಬ್ರಿಜ್ನಿಂದ ದೇವದುರ್ಗಕ್ಕೆ ಬರುವಾಗ ಬಸ್ ಹತ್ತುವ ಸಂದರ್ಭದಲ್ಲಿ ಕಳ್ಳರು ಕಳವು ಮಾಡಿದ್ದಾರೆ. ತಕ್ಷಣವೇ ಎಚ್ಚೆತ್ತ ಮಹಿಳೆ ಪತಿಗೆ ವಿಷಯ ತಿಳಿಸಿದ್ದಾರೆ. ಬಸ್ನಲ್ಲಿರುವ ಪ್ರಯಾಣಿಕರನ್ನು ವಿಚಾರಿಸಿದರೂ ಪ್ರಯೋಜನವಾಗಿಲ್ಲ.</p>.<p>ನಂತರ ಜಾಲಹಳ್ಳಿ ಪಟ್ಟಣದ ಪೊಲೀಸ್ ಠಾಣೆಗೆ ಬಸ್ ಕರೆತಂದು ಬಸ್ನಲ್ಲಿದ್ದ ಎಲ್ಲ ಪ್ರಯಾಣಿಕರ ಬ್ಯಾಗ್ಗಳನ್ನು ಪರಿಶೀಲಿಸಿದರೂ ಚಿನ್ನದ ಸರಗಳು ಸಿಕ್ಕಿಲ್ಲ. ಈ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.</p>.<p>‘ತಿಂಥಣಿ ಬ್ರಿಜ್ ದೇವದುರ್ಗ ತಾಲ್ಲೂಕಿಗೆ ಸೇರಿದ್ದು, ಲಿಂಗಸೂಗೂರು, ಸುರಪುರ, ದೇವದುರ್ಗ ತಾಲ್ಲೂಕುಗಳ ಸಂಪರ್ಕ ಕಲ್ಪಿಸುವ ಕೇಂದ್ರ. ಇಲ್ಲಿ ನಿತ್ಯ ಒಂದಿಲ್ಲ ವಸ್ತುಗಳ ಕಳವು ನಡೆಯುತ್ತದೆ. ಆದರೆ, ಕೆಲವರು ಮಾತ್ರ ದೂರು ನೀಡುತ್ತಾರೆ’ ಎಂದು ಆರೋಪ ಕೇಳಿ ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>