<p>ಜಾಲಹಳ್ಳಿ: ಭೂಮಾಪಕರ ಪ್ರತಿಭಟನೆಯಿಂದ ಸಣ್ಣ ಹಾಗೂ ಬಡ ರೈತರಿಗೆ ತುಂಬಾ ತೊಂದರೆ ಉಂಟಾಗಿದೆ. ಕಳೆದ 50 ದಿನಗಳಿಂದ ತಾಲ್ಲೂಕಿನ ಯಾವುದೇ ರೈತರ ಜಮೀನುಗಳ ಸರ್ವೆ ನಡೆದಿಲ್ಲ.</p>.<p>ಪರವಾನಗಿ ಹೊಂದಿರುವ ಭೂಮಾಪಕರ ಕಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಲಸ ಬಿಟ್ಟು ಹೋರಾಟ ಮಾಡುತ್ತಿದ್ದಾರೆ. ಇದರ ಪರಿಣಾಮ ದೇವದುರ್ಗ ಹಾಗೂ ಅರಕೇರ ತಾಲ್ಲೂಕಿನ ಸರ್ವೇ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ</p>.<p>ಎರಡೂ ತಾಲ್ಲೂಕಿನಲ್ಲಿ ವಿವಿಧ ಕೆಲಸಕ್ಕೆ ಸುಮಾರು 1500ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. </p>.<p>‘ಭೂಮಿಯ ಅಳತೆ, ದಾಖಲೆ ಪರಿಶೀಲನೆ ಸೇರಿದಂತೆ ಸರ್ವೇ ಸಂಬಂಧಿತ ಎಲ್ಲಾ ಕಾರ್ಯಗಳು ಸ್ಥಗಿತಗೊಂಡಿವೆ. ರೈತರು ನಿತ್ಯ ಅಗತ್ಯ ದಾಖಲೆಗಳಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ರೈತ ಮುಖಂಡ ಹನಮಂತಪ್ಪ ಮಂಡಲಗುಡ್ಡ ದೂರಿದ್ದಾರೆ.</p>.<p>ಭೂಮಿ ಮಾರಾಟ, ವರ್ಗಾವಣೆ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದು ಕೃಷಿ ಚಟುವಟಿಕೆಗಳ ಮೇಲೂ ಪರಿಣಮ ಬೀರುತ್ತಿದೆ. ಸಮಸ್ಯೆ ಬಗ್ಗೆ ಜಿಲ್ಲಾ ಅಧಿಕಾರಿಗಳು ಗಮನ ಹರಿಸಿ ತಕ್ಷಣವೇ ರೈತರಿಗೆ ಅನುಕೂಲ ಕಲ್ಪಿಸಬೇಕು. ಬಹುತೇಕ ರೈತರು ಈ ಸಮಸ್ಯೆಯಿಂದ ರೂಸಿ ಹೋಗಿದ್ದಾರೆ. ಅಧಿಕಾರಿಗಳು ನಿರ್ಲಕ್ಷ್ಯ ಮಾಡುವುದನ್ನು ಬಿಟ್ಟು ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-32-980889907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಾಲಹಳ್ಳಿ: ಭೂಮಾಪಕರ ಪ್ರತಿಭಟನೆಯಿಂದ ಸಣ್ಣ ಹಾಗೂ ಬಡ ರೈತರಿಗೆ ತುಂಬಾ ತೊಂದರೆ ಉಂಟಾಗಿದೆ. ಕಳೆದ 50 ದಿನಗಳಿಂದ ತಾಲ್ಲೂಕಿನ ಯಾವುದೇ ರೈತರ ಜಮೀನುಗಳ ಸರ್ವೆ ನಡೆದಿಲ್ಲ.</p>.<p>ಪರವಾನಗಿ ಹೊಂದಿರುವ ಭೂಮಾಪಕರ ಕಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಲಸ ಬಿಟ್ಟು ಹೋರಾಟ ಮಾಡುತ್ತಿದ್ದಾರೆ. ಇದರ ಪರಿಣಾಮ ದೇವದುರ್ಗ ಹಾಗೂ ಅರಕೇರ ತಾಲ್ಲೂಕಿನ ಸರ್ವೇ ಕಾರ್ಯ ಸಂಪೂರ್ಣ ಸ್ಥಗಿತಗೊಂಡಿದೆ</p>.<p>ಎರಡೂ ತಾಲ್ಲೂಕಿನಲ್ಲಿ ವಿವಿಧ ಕೆಲಸಕ್ಕೆ ಸುಮಾರು 1500ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. </p>.<p>‘ಭೂಮಿಯ ಅಳತೆ, ದಾಖಲೆ ಪರಿಶೀಲನೆ ಸೇರಿದಂತೆ ಸರ್ವೇ ಸಂಬಂಧಿತ ಎಲ್ಲಾ ಕಾರ್ಯಗಳು ಸ್ಥಗಿತಗೊಂಡಿವೆ. ರೈತರು ನಿತ್ಯ ಅಗತ್ಯ ದಾಖಲೆಗಳಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ರೈತ ಮುಖಂಡ ಹನಮಂತಪ್ಪ ಮಂಡಲಗುಡ್ಡ ದೂರಿದ್ದಾರೆ.</p>.<p>ಭೂಮಿ ಮಾರಾಟ, ವರ್ಗಾವಣೆ ಪ್ರಕ್ರಿಯೆಗಳು ವಿಳಂಬವಾಗುತ್ತಿದ್ದು ಕೃಷಿ ಚಟುವಟಿಕೆಗಳ ಮೇಲೂ ಪರಿಣಮ ಬೀರುತ್ತಿದೆ. ಸಮಸ್ಯೆ ಬಗ್ಗೆ ಜಿಲ್ಲಾ ಅಧಿಕಾರಿಗಳು ಗಮನ ಹರಿಸಿ ತಕ್ಷಣವೇ ರೈತರಿಗೆ ಅನುಕೂಲ ಕಲ್ಪಿಸಬೇಕು. ಬಹುತೇಕ ರೈತರು ಈ ಸಮಸ್ಯೆಯಿಂದ ರೂಸಿ ಹೋಗಿದ್ದಾರೆ. ಅಧಿಕಾರಿಗಳು ನಿರ್ಲಕ್ಷ್ಯ ಮಾಡುವುದನ್ನು ಬಿಟ್ಟು ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260420-32-980889907</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>