ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಲ್ಲಾ ಸಾಹಿತ್ಯಗಳ ತಾಯಿ ಜಾನಪದ ಸಾಹಿತ್ಯ’

Last Updated 9 ಮಾರ್ಚ್ 2020, 15:23 IST
ಅಕ್ಷರ ಗಾತ್ರ

ರಾಯಚೂರು: ಜಾನಪದ ಸಾಹಿತ್ಯ, ಗ್ರಾಮೀಣ ಪ್ರದೇಶದ ಜನರ ಬದುಕಿನ ಜೀವನಾಡಿ. ಗುರು–ಹಿರಿಯರು, ಹೆತ್ತವರಿಗೆ ಗೌರವ ಕೊಡುವುದನ್ನು ಕಲಿಸುತ್ತದೆ ಹಾಗೂ ಎಲ್ಲಾ ಸಾಹಿತ್ಯಗಳ ತಾಯಿ ಬೇರು ಎಂದು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ ಅಭಿಪ್ರಾಯಪಟ್ಟರು.

ನಗದ ಜಸ್ಟಿಸ್ ಶಿವರಾಜ್ ಪಾಟೀಲ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಕನ್ನಡ ಜಾನಪದ ಪರಿಷತ್ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಕನ್ನಡ ಜಾನಪದ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.

ಸಮಾಜದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಟಿ.ವಿ ಧಾರಾವಾಹಿಗಳಲ್ಲಿ ಒಂದು ಹೆಣ್ಣಿನ ಬೆಳವಣಿಗೆಯನ್ನು ಮತ್ತೊಂದು ಹೆಣ್ಣು ಸಹಿಸುವುದಿಲ್ಲ ಎನ್ನುವ ರೀತಿಯಲ್ಲಿ ಮಹಿಳೆಯರನ್ನು ತೋರಿಸುತ್ತಿದ್ದು ಸರಿಯಲ್ಲ. ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರು ಹಿಮ ಬಿಂದು ಮಾತನಾಡಿ, ಕನ್ನಡ ಜಾನಪದ ಪರಿಷತ್ತು ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು ಶ್ಲಾಘನೀಯ. ನಮ್ಮ ಹಿರಿಯರ ಆಚಾರ ವಿಚಾರಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬ ವಿದ್ಯಾರ್ಥಿಗಳೂ ಜಾನಪದ ಸಾಹಿತ್ಯವನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.

ಸಾಹಿತಿ ಮುರಳಿಧರ ಕುಲಕರ್ಣಿ ಮಾತನಾಡಿದರು. ಮಧೂರ ಪ್ರಾರ್ಥಿಸಿದರು. ಉಪನ್ಯಾಸಕ ಅವಿನಾಶ ಪಾಟೀಲ್ ಸ್ವಾಗತಿಸಿದರು. ವಿದ್ಯಾರ್ಥಿನಿ ಮೈತ್ರಾ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT