<p><strong>ರಾಯಚೂರು: </strong>ಜಾನಪದ ಸಾಹಿತ್ಯ, ಗ್ರಾಮೀಣ ಪ್ರದೇಶದ ಜನರ ಬದುಕಿನ ಜೀವನಾಡಿ. ಗುರು–ಹಿರಿಯರು, ಹೆತ್ತವರಿಗೆ ಗೌರವ ಕೊಡುವುದನ್ನು ಕಲಿಸುತ್ತದೆ ಹಾಗೂ ಎಲ್ಲಾ ಸಾಹಿತ್ಯಗಳ ತಾಯಿ ಬೇರು ಎಂದು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ ಅಭಿಪ್ರಾಯಪಟ್ಟರು.</p>.<p>ನಗದ ಜಸ್ಟಿಸ್ ಶಿವರಾಜ್ ಪಾಟೀಲ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಕನ್ನಡ ಜಾನಪದ ಪರಿಷತ್ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಕನ್ನಡ ಜಾನಪದ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.</p>.<p>ಸಮಾಜದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಟಿ.ವಿ ಧಾರಾವಾಹಿಗಳಲ್ಲಿ ಒಂದು ಹೆಣ್ಣಿನ ಬೆಳವಣಿಗೆಯನ್ನು ಮತ್ತೊಂದು ಹೆಣ್ಣು ಸಹಿಸುವುದಿಲ್ಲ ಎನ್ನುವ ರೀತಿಯಲ್ಲಿ ಮಹಿಳೆಯರನ್ನು ತೋರಿಸುತ್ತಿದ್ದು ಸರಿಯಲ್ಲ. ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲರು ಹಿಮ ಬಿಂದು ಮಾತನಾಡಿ, ಕನ್ನಡ ಜಾನಪದ ಪರಿಷತ್ತು ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು ಶ್ಲಾಘನೀಯ. ನಮ್ಮ ಹಿರಿಯರ ಆಚಾರ ವಿಚಾರಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬ ವಿದ್ಯಾರ್ಥಿಗಳೂ ಜಾನಪದ ಸಾಹಿತ್ಯವನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಸಾಹಿತಿ ಮುರಳಿಧರ ಕುಲಕರ್ಣಿ ಮಾತನಾಡಿದರು. ಮಧೂರ ಪ್ರಾರ್ಥಿಸಿದರು. ಉಪನ್ಯಾಸಕ ಅವಿನಾಶ ಪಾಟೀಲ್ ಸ್ವಾಗತಿಸಿದರು. ವಿದ್ಯಾರ್ಥಿನಿ ಮೈತ್ರಾ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಜಾನಪದ ಸಾಹಿತ್ಯ, ಗ್ರಾಮೀಣ ಪ್ರದೇಶದ ಜನರ ಬದುಕಿನ ಜೀವನಾಡಿ. ಗುರು–ಹಿರಿಯರು, ಹೆತ್ತವರಿಗೆ ಗೌರವ ಕೊಡುವುದನ್ನು ಕಲಿಸುತ್ತದೆ ಹಾಗೂ ಎಲ್ಲಾ ಸಾಹಿತ್ಯಗಳ ತಾಯಿ ಬೇರು ಎಂದು ಕನ್ನಡ ಜಾನಪದ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಂಡಪ್ಪ ಬಿರಾದಾರ ಅಭಿಪ್ರಾಯಪಟ್ಟರು.</p>.<p>ನಗದ ಜಸ್ಟಿಸ್ ಶಿವರಾಜ್ ಪಾಟೀಲ್ ಪದವಿ ಪೂರ್ವ ಕಾಲೇಜಿನಲ್ಲಿ ಭಾನುವಾರ ಕನ್ನಡ ಜಾನಪದ ಪರಿಷತ್ ಜಿಲ್ಲಾ ಹಾಗೂ ತಾಲ್ಲೂಕು ಘಟಕದಿಂದ ಕನ್ನಡ ಜಾನಪದ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದರು.</p>.<p>ಸಮಾಜದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಟಿ.ವಿ ಧಾರಾವಾಹಿಗಳಲ್ಲಿ ಒಂದು ಹೆಣ್ಣಿನ ಬೆಳವಣಿಗೆಯನ್ನು ಮತ್ತೊಂದು ಹೆಣ್ಣು ಸಹಿಸುವುದಿಲ್ಲ ಎನ್ನುವ ರೀತಿಯಲ್ಲಿ ಮಹಿಳೆಯರನ್ನು ತೋರಿಸುತ್ತಿದ್ದು ಸರಿಯಲ್ಲ. ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಕಾರ್ಯನಿರ್ವಹಿಸಿ ಸೈ ಎನಿಸಿಕೊಂಡಿದ್ದಾರೆ ಎಂದು ಹೇಳಿದರು.</p>.<p>ಕಾಲೇಜಿನ ಪ್ರಾಂಶುಪಾಲರು ಹಿಮ ಬಿಂದು ಮಾತನಾಡಿ, ಕನ್ನಡ ಜಾನಪದ ಪರಿಷತ್ತು ಜಾನಪದ ಸಾಹಿತ್ಯವನ್ನು ಉಳಿಸಿ ಬೆಳೆಸುವಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು ಶ್ಲಾಘನೀಯ. ನಮ್ಮ ಹಿರಿಯರ ಆಚಾರ ವಿಚಾರಗಳನ್ನು ತಿಳಿದುಕೊಳ್ಳಲು ಪ್ರತಿಯೊಬ್ಬ ವಿದ್ಯಾರ್ಥಿಗಳೂ ಜಾನಪದ ಸಾಹಿತ್ಯವನ್ನು ಅಧ್ಯಯನ ಮಾಡಬೇಕು ಎಂದು ಸಲಹೆ ನೀಡಿದರು.</p>.<p>ಸಾಹಿತಿ ಮುರಳಿಧರ ಕುಲಕರ್ಣಿ ಮಾತನಾಡಿದರು. ಮಧೂರ ಪ್ರಾರ್ಥಿಸಿದರು. ಉಪನ್ಯಾಸಕ ಅವಿನಾಶ ಪಾಟೀಲ್ ಸ್ವಾಗತಿಸಿದರು. ವಿದ್ಯಾರ್ಥಿನಿ ಮೈತ್ರಾ ನಿರೂಪಿಸಿ, ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>