<p><strong>ರಾಯಚೂರು:</strong> ‘ಸರ್ವಜ್ಞ ಅವರು ಕನ್ನಡ ಸಾಹಿತ್ಯದ ಜನಪ್ರಿಯ ತ್ರಿಪದಿ ಕವಿ. ಸರಳ ತ್ರಿಪದಿಗಳ ಮೂಲಕ ಸಮಾಜ ಸುಧಾರಣೆ, ನೀತಿ, ಜೀವನದ ಸತ್ಯ ಮತ್ತು ಕಾಯಕದ ಮಹತ್ವವನ್ನು ಸಾರಿದ್ದಾರೆ’ ಎಂದು ಯರಮರಸ್ನ ನಿವೃತ್ತ ಪ್ರಾಂಶುಪಾಲ ವೈ. ಸುರೇಂದ್ರಬಾಬು ಕುಂಬಾರ ಹೇಳಿದರು.</p>.<p>ಇಲ್ಲಿಯ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ವಜ್ಞ ಅವರು ವಚನಗಳು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುತ್ತವೆ. ಹರಿತವಾದ ತ್ರಿಪದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾಧಿಕಾರಿ ಕೃಷ್ಣ ಕಟ್ಟಿಮನಿ ಮಾತನಾಡಿ, ‘ಸರ್ವಜ್ಞ ಅವರು ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ಇಡೀ ಜಗತ್ತಿಗೆ ಉತ್ತಮ ಸಂದೇಶಗಳನ್ನು ನೀಡಿದ ಕವಿಯಾಗಿದ್ದಾರೆ’ ಎಂದರು.</p>.<p>‘ಸಮ ಸಮಾಜ ನಿರ್ಮಾಣ ಕುರಿತು ಜನತೆಗೆ ತಮ್ಮ ವಚನಗಳ ಮೂಲಕ ಸಂದೇಶ ನೀಡಿದ್ದಾರೆ. ಸಮಾಜ ಇನ್ನಷ್ಟು ಅಭಿವೃದ್ಧಿಯಾಗಲು ಸಮಾಜದ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಸಮಾರಂಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಪರಶುರಾಮ, ಸಮಾಜದ ಪ್ರಮುಖರಾದ ಶಿವರಾಜಪ್ಪ, ವೀರಭದ್ರಪ್ಪ, ಬಸವರಾಜ, ಶಿವಪ್ರಕಾಶ, ಭೀಮಪ್ಪ, ಲಕ್ಷ್ಮಿರೆಡ್ಡಿ, ತಿಮ್ಮಪ್ಪ, ಬಸವರಾಜ, ರಮೇಶ, ನರಸಿಂಗಪ್ಪ, ಸಾಯಿಬಾಬಾ ಉಪಸ್ಥಿತರಿದ್ದರು.</p>.<p class="Subhead">ಮೆರವಣಿಗೆ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂತಕವಿ ಸರ್ವಜ್ಞ ಅವರ ಭಾವಚಿತ್ರದ ಮೆರವಣಿಗೆಗೆ ಸಚಿವ ಎನ್.ಎಸ್.ಬೋಸರಾಜು ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರಕ್ಕೆ ಬಂದಿತು.</p>.<p>ಮುಖಂಡರಾದ ಕೆ.ಶಾಂತಪ್ಪ, ರಾಯಚೂರು ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್, ತಹಶೀಲ್ದಾರ್ ಸುರೇಶ ವರ್ಮಾ ಪಾಲ್ಗೊಂಡಿದ್ದರು.</p>
<p><strong>ರಾಯಚೂರು:</strong> ‘ಸರ್ವಜ್ಞ ಅವರು ಕನ್ನಡ ಸಾಹಿತ್ಯದ ಜನಪ್ರಿಯ ತ್ರಿಪದಿ ಕವಿ. ಸರಳ ತ್ರಿಪದಿಗಳ ಮೂಲಕ ಸಮಾಜ ಸುಧಾರಣೆ, ನೀತಿ, ಜೀವನದ ಸತ್ಯ ಮತ್ತು ಕಾಯಕದ ಮಹತ್ವವನ್ನು ಸಾರಿದ್ದಾರೆ’ ಎಂದು ಯರಮರಸ್ನ ನಿವೃತ್ತ ಪ್ರಾಂಶುಪಾಲ ವೈ. ಸುರೇಂದ್ರಬಾಬು ಕುಂಬಾರ ಹೇಳಿದರು.</p>.<p>ಇಲ್ಲಿಯ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಸಂತ ಕವಿ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಸರ್ವಜ್ಞ ಅವರು ವಚನಗಳು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುತ್ತವೆ. ಹರಿತವಾದ ತ್ರಿಪದಿಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ’ ಎಂದು ತಿಳಿಸಿದರು.</p>.<p>ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾಧಿಕಾರಿ ಕೃಷ್ಣ ಕಟ್ಟಿಮನಿ ಮಾತನಾಡಿ, ‘ಸರ್ವಜ್ಞ ಅವರು ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಅವರು ಇಡೀ ಜಗತ್ತಿಗೆ ಉತ್ತಮ ಸಂದೇಶಗಳನ್ನು ನೀಡಿದ ಕವಿಯಾಗಿದ್ದಾರೆ’ ಎಂದರು.</p>.<p>‘ಸಮ ಸಮಾಜ ನಿರ್ಮಾಣ ಕುರಿತು ಜನತೆಗೆ ತಮ್ಮ ವಚನಗಳ ಮೂಲಕ ಸಂದೇಶ ನೀಡಿದ್ದಾರೆ. ಸಮಾಜ ಇನ್ನಷ್ಟು ಅಭಿವೃದ್ಧಿಯಾಗಲು ಸಮಾಜದ ಜನರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು’ ಎಂದು ಸಲಹೆ ನೀಡಿದರು.</p>.<p>ಸಮಾರಂಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಪರಶುರಾಮ, ಸಮಾಜದ ಪ್ರಮುಖರಾದ ಶಿವರಾಜಪ್ಪ, ವೀರಭದ್ರಪ್ಪ, ಬಸವರಾಜ, ಶಿವಪ್ರಕಾಶ, ಭೀಮಪ್ಪ, ಲಕ್ಷ್ಮಿರೆಡ್ಡಿ, ತಿಮ್ಮಪ್ಪ, ಬಸವರಾಜ, ರಮೇಶ, ನರಸಿಂಗಪ್ಪ, ಸಾಯಿಬಾಬಾ ಉಪಸ್ಥಿತರಿದ್ದರು.</p>.<p class="Subhead">ಮೆರವಣಿಗೆ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂತಕವಿ ಸರ್ವಜ್ಞ ಅವರ ಭಾವಚಿತ್ರದ ಮೆರವಣಿಗೆಗೆ ಸಚಿವ ಎನ್.ಎಸ್.ಬೋಸರಾಜು ಚಾಲನೆ ನೀಡಿದರು. ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪಂಡಿತ ಸಿದ್ಧರಾಮ ಜಂಬಲದಿನ್ನಿ ಜಿಲ್ಲಾ ರಂಗ ಮಂದಿರಕ್ಕೆ ಬಂದಿತು.</p>.<p>ಮುಖಂಡರಾದ ಕೆ.ಶಾಂತಪ್ಪ, ರಾಯಚೂರು ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ್, ತಹಶೀಲ್ದಾರ್ ಸುರೇಶ ವರ್ಮಾ ಪಾಲ್ಗೊಂಡಿದ್ದರು.</p>