ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕು ಮುದಗಲ್ನಲ್ಲಿರುವ ಜವಾಹರ ನವೋದಯ ವಿದ್ಯಾಲಯವು ಸಿಬಿಎಸ್ಇ 10ನೇ ತರಗತಿ ಫಲಿತಾಂಶದಲ್ಲಿ ನೂರಕ್ಕೆ ನೂರರಷ್ಟು ಸಾಧನೆ ಮಾಡಿದೆ.ವಿದ್ಯಾಲಯದ 81 ವಿದ್ಯಾರ್ಥಿಗಳೆಲ್ಲರೂ ತೇರ್ಗಡೆಯಾಗಿದ್ದಾರೆ. ಟಿ.ಸ್ನೇಹಾ ಶೇ 97 ಅಂಕಗಳ ಸಾಧನೆ ಮಾಡಿದ್ದು, ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.