ಜಾಲಹಳ್ಳಿ (ರಾಯಚೂರು ಜಿಲ್ಲೆ): ಸಮೀಪದ ನಿಲವಂಜಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೊಳವೆಬಾವಿ ಕೊರೆಯುವ ಯಂತ್ರದಲ್ಲಿ ಕೆಲಸ ಮಾಡುವ ಮೂವರು ಯುವಕರು ಗಾಢ ನಿದ್ರೆಯಲ್ಲಿದ್ದಾಗ ಅವರ ಮೇಲೆ ಜೆಸಿಬಿ ಯಂತ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟವರನ್ನು ಛತ್ತೀಸ್ಗಢ ಮೂಲದ ಕೃಷ್ಣಾ(25) ಶಿವುರಾಮ(30), ಬಲರಾಮ(28) ಎಂದು ಗುರುತಿಸಲಾಗಿದೆ.
ಬೋರ್ವೆಲ್ ಕೆಲಸ ಮುಗಿಸಿಕೊಂಡು ಜಮೀನಿನಲ್ಲೇ ಮಲಗಿದ್ದ ವೇಳೆ ಈ ದುರಂತ ನಡೆದಿದೆ.