ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸಿಇಟಿ ಕೋರ್ಸ್ಗಳ ಪ್ರವೇಶಾತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪೊಲೀಸ್ ಇಲಾಖೆಯಿಂದ ಸಂಪೂರ್ಣ ಭದ್ರತೆ ಹಾಗೂ ಸಹಕಾರ ನೀಡಲಾಗುವುದು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸದಾಶಿವಪ್ಪ, ತಹಶೀಲ್ದಾರ್ ಮಂಜುನಾಥ, ವಿವಿಧ ಕಾಲೇಜಿನ ಪ್ರಾಚಾರ್ಯರ ಪ್ರಕಾಶ ಕುಲಕರ್ಣಿ, ಗೋಪಾಲ ನಾಯಕ, ಬಸಪ್ಪ ಗದ್ದಿ, ಡಾ.ಶಿವರಾಜ, ಶಂಕರಗೌಡ ಇದ್ದರು.