ಬೆಳೆಸಾಲ ಪಡೆದಿರುವ ರೈತರು ಕಡ್ಡಾಯವಾಗಿ ವಿಮೆಗೆ ಒಳಪಡುತ್ತಾರೆ. ಬೆಳೆಸಾಲ ಪಡೆಯದಿದ್ದ ರೈತರು ಸ್ವ ಇಚ್ಚೆಯಿಂದ ಬೆಳೆ ವಿಮೆ ಮಾಡಿಸಬೇಕಿರುತ್ತದೆ. ಪಹಣಿ, ಬ್ಯಾಂಕ್ ಖಾತೆ ಪಾಸ್ಬುಕ್, ಆಧಾರ್ ಸಂಖ್ಯೆ ಮತ್ತು ಸ್ವಯಂ ಘೋಷಣೆ ಬೆಳೆ ದಾಖಲಾತಿಗಳೊಂದಿಗೆ ಬ್ಯಾಂಕ್ಗಳಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಗೆ ಸಂಪರ್ಕಿಸಬಹುದು.