ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರಿನಿಂದ ನ್ಯಾ.ಮಲ್ಲಿಕಾರ್ಜುನಗೌಡ ವರ್ಗಾವಣೆ

Last Updated 18 ಫೆಬ್ರುವರಿ 2022, 9:15 IST
ಅಕ್ಷರ ಗಾತ್ರ

ರಾಯಚೂರು: ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಹೈಕೋರ್ಟ್‌ ಆದೇಶ ನೀಡಿದೆ. ಬೆಂಗಳೂರಿನಲ್ಲಿ ಓಓಡಿ ಅಧ್ಯಕ್ಷರೆಂದು ಸ್ಥಳ ನಿಯುಕ್ತಿ ಮಾಡಲಾಗಿದೆ.

ಗಣರಾಜ್ಯೋತ್ಸವ ದಿನದಂದು ಡಾ.ಬಿ.ಆರ್‌.ಅಂಬೇಡ್ಕರ್‌ ಭಾವಚಿತ್ರ ತೆರವುಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ನ್ಯಾ.ಮಲ್ಲಿಕಾರ್ಜುನಗೌಡ ಅವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಾಜ್ಯದಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ದಲಿತ ಸಂಘಟನೆಗಳ ಒಕ್ಕೂಟವು ಫೆಬ್ರುವರಿ 19 ರಂದು ’ವಿಧಾನಸೌಧ ಚಲೋ‘ ಹೋರಾಟಕ್ಕೆ ಕರೆ ನೀಡಿದೆ. ಇದೀಗ ನ್ಯಾಯಾಧೀಶರನ್ನು ಹೈಕೋರ್ಟ್‌ ವರ್ಗಾವಣೆ ಮಾಡಿರುವುದರಿಂದ, ಹೋರಾಟ ಮುಂದುವರಿಸುವುದೇ? ಕೈಬಿಡುವುದೇ? ಎಂಬುದನ್ನು ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT