<p><strong>ಕಕ್ಕೇರಾ: ಕ</strong>ಳೆದ 15 ದಿನಗಳಿಂದ ವಿವಿಧ ವಾರ್ಡ್ಗಳ ರಸ್ತೆಗಳಲ್ಲಿ ಕಸ ಸಂಗ್ರಹವಾಗಿ ಗಬ್ಬೆದ್ದು ನಾರುತ್ತಿದೆ. ಇದು ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುತ್ತಿದ್ದು, ಇದರಲ್ಲಿ ಪುರಸಭೆ ಅಧಿಕಾರಿಗಳ ನಿಷ್ಕಾಳಜಿ ಎದ್ದು ಕಾಣುತ್ತಿದೆ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಪುರಸಭೆಯಲ್ಲಿ 2 ಟ್ರ್ಯಾಕ್ಟರ್ ಹಾಗೂ 6 ಮಿನಿ ಟಾಟಾ ಎ.ಸಿ ವಾಹನಗಳಿದೆ. ಆರು ಟಾಟಾ ಎ.ಸಿಗಳು ದುರಸ್ತಿಯಲ್ಲಿವೆ ಎಂದರೆ ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ ಎಂಬುದು ತಿಳಿಯುತ್ತದೆ’ ಎಂದು ಮುಖಂಡ ಪರಮಣ್ಣ ವಡಿಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಈ ಕೂಡಲೇ ಮಿನಿ ಟಾಟಾ ವಾಹನಗಳನ್ನು ದುರಸ್ತಿಗೊಳಿಸಿಬೇಕು. ಬೆಳಗಿನ ಜಾವ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಜೊತೆ ಕೆಲಸ ನಿರ್ವಹಿಸುವ ಸ್ಥಳದಲ್ಲಿ ಅಧಿಕಾರಿಗಳು ಹಾಜರಿರಬೇಕು. ಮುಖ್ಯಾಧಿಕಾರಿಗಳು ಸಹ ಗಮನ ಹರಿಸಬೇಕು’ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-30-381816955</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಕ್ಕೇರಾ: ಕ</strong>ಳೆದ 15 ದಿನಗಳಿಂದ ವಿವಿಧ ವಾರ್ಡ್ಗಳ ರಸ್ತೆಗಳಲ್ಲಿ ಕಸ ಸಂಗ್ರಹವಾಗಿ ಗಬ್ಬೆದ್ದು ನಾರುತ್ತಿದೆ. ಇದು ಸಾಂಕ್ರಾಮಿಕ ರೋಗಗಳಿಗೆ ಆಹ್ವಾನ ನೀಡುತ್ತಿದ್ದು, ಇದರಲ್ಲಿ ಪುರಸಭೆ ಅಧಿಕಾರಿಗಳ ನಿಷ್ಕಾಳಜಿ ಎದ್ದು ಕಾಣುತ್ತಿದೆ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>‘ಪುರಸಭೆಯಲ್ಲಿ 2 ಟ್ರ್ಯಾಕ್ಟರ್ ಹಾಗೂ 6 ಮಿನಿ ಟಾಟಾ ಎ.ಸಿ ವಾಹನಗಳಿದೆ. ಆರು ಟಾಟಾ ಎ.ಸಿಗಳು ದುರಸ್ತಿಯಲ್ಲಿವೆ ಎಂದರೆ ಸಂಬಂಧಪಟ್ಟ ಅಧಿಕಾರಿಗಳ ಕಾರ್ಯವೈಖರಿ ಹೇಗಿದೆ ಎಂಬುದು ತಿಳಿಯುತ್ತದೆ’ ಎಂದು ಮುಖಂಡ ಪರಮಣ್ಣ ವಡಿಕೇರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>‘ಈ ಕೂಡಲೇ ಮಿನಿ ಟಾಟಾ ವಾಹನಗಳನ್ನು ದುರಸ್ತಿಗೊಳಿಸಿಬೇಕು. ಬೆಳಗಿನ ಜಾವ ಕಾರ್ಯನಿರ್ವಹಿಸುವ ಪೌರಕಾರ್ಮಿಕರ ಜೊತೆ ಕೆಲಸ ನಿರ್ವಹಿಸುವ ಸ್ಥಳದಲ್ಲಿ ಅಧಿಕಾರಿಗಳು ಹಾಜರಿರಬೇಕು. ಮುಖ್ಯಾಧಿಕಾರಿಗಳು ಸಹ ಗಮನ ಹರಿಸಬೇಕು’ ಎಂದು ಸ್ಥಳೀಯರು ಮನವಿ ಮಾಡಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260319-30-381816955</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>