<p><strong>ರಾಯಚೂರು</strong>: ನಗರದ ನವೋದಯ ದಂತ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಲಯ ಪುರುಷರು ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.</p>.<p>ನವೋದಯ ಶಿಕ್ಷಣ ಟ್ರಸ್ಟ್ ನ ರಿಜಿಸ್ಟ್ರಾರ್ ಡಾ. ಟಿ.ಶ್ರೀನಿವಾಸ್ ಪಂದ್ಯಾವಳಿಗೆ ಚಾಲನೆ ನೀಡಿದರು.<br> ನಂತರ ಮಾತನಾಡಿದ ಅವರು, ‘ಕಾರ್ಯತಂತ್ರದ ಚಿಂತನೆ, ತಾಳ್ಮೆ ಹಾಗೂ ಮಾನಸಿಕ ಶಿಸ್ತು ಬೆಳೆಸಲು ಚೆಸ್ ಕ್ರೀಡೆ ಸಹಕಾರಿ’ ಎಂದರು.</p>.<p>ನವೋದಯ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಎಸ್.ಆರ್. ರೆಡ್ಡಿ ಕಾಲೇಜಿನ ಪ್ರಾಂಶುಪಾಲ ಗಿರೀಶ ಕಟ್ಟಿ, ನವೋದಯ ವೈದ್ಯಕೀಯ ಕಾಲೇಜಿನ ಡೀನ್ ಡಾ. ದೇವಾನಂದ, ವಲಯ ಸಂಯೋಜಕ ನೇಥಾನಿಯಲ್, ಡಾ.ಅಮೃತ ರೆಡ್ಡಿ, ಡಾ. ಪಿ. ವಿಜಯಕುಮಾರ, ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಕಾಂತ, ಡಾ.ಕಿರಣಕುಮಾರ ಉಪಸ್ಥಿತರಿದ್ದರು.</p>.<p>ಕಲಬುರಗಿ ವಲಯದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯೋಜಿತ<br> 27 ಕಾಲೇಜುಗಳ 100ಕ್ಕೂ ಅಧಿಕ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಗರದ ನವೋದಯ ದಂತ ಕಾಲೇಜು ಮತ್ತು ಆಸ್ಪತ್ರೆಯ ವತಿಯಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಲಯ ಪುರುಷರು ಮತ್ತು ಮಹಿಳೆಯರ ಚೆಸ್ ಪಂದ್ಯಾವಳಿ ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.</p>.<p>ನವೋದಯ ಶಿಕ್ಷಣ ಟ್ರಸ್ಟ್ ನ ರಿಜಿಸ್ಟ್ರಾರ್ ಡಾ. ಟಿ.ಶ್ರೀನಿವಾಸ್ ಪಂದ್ಯಾವಳಿಗೆ ಚಾಲನೆ ನೀಡಿದರು.<br> ನಂತರ ಮಾತನಾಡಿದ ಅವರು, ‘ಕಾರ್ಯತಂತ್ರದ ಚಿಂತನೆ, ತಾಳ್ಮೆ ಹಾಗೂ ಮಾನಸಿಕ ಶಿಸ್ತು ಬೆಳೆಸಲು ಚೆಸ್ ಕ್ರೀಡೆ ಸಹಕಾರಿ’ ಎಂದರು.</p>.<p>ನವೋದಯ ಶಿಕ್ಷಣ ಟ್ರಸ್ಟ್ನ ಅಧ್ಯಕ್ಷ ಎಸ್.ಆರ್. ರೆಡ್ಡಿ ಕಾಲೇಜಿನ ಪ್ರಾಂಶುಪಾಲ ಗಿರೀಶ ಕಟ್ಟಿ, ನವೋದಯ ವೈದ್ಯಕೀಯ ಕಾಲೇಜಿನ ಡೀನ್ ಡಾ. ದೇವಾನಂದ, ವಲಯ ಸಂಯೋಜಕ ನೇಥಾನಿಯಲ್, ಡಾ.ಅಮೃತ ರೆಡ್ಡಿ, ಡಾ. ಪಿ. ವಿಜಯಕುಮಾರ, ದೈಹಿಕ ಶಿಕ್ಷಣ ನಿರ್ದೇಶಕ ಚಂದ್ರಕಾಂತ, ಡಾ.ಕಿರಣಕುಮಾರ ಉಪಸ್ಥಿತರಿದ್ದರು.</p>.<p>ಕಲಬುರಗಿ ವಲಯದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಸಂಯೋಜಿತ<br> 27 ಕಾಲೇಜುಗಳ 100ಕ್ಕೂ ಅಧಿಕ ಆಟಗಾರರು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>