<p>ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ–ಭೇದಿ ಕಾಣಿಸಿಕೊಂಡ ಪರಿಣಾಮ 40 ಜನ ಅಸ್ವಸ್ಥಗೊಂಡಿದ್ದಾರೆ.</p>.<p>‘ಭೂತಲದಿನ್ನಿ ಆರೋಗ್ಯ ಕೇಂದ್ರದಲ್ಲಿ 27 ಜನ ಚಿಕಿತ್ಸೆ ಪಡೆದಿದ್ದಾರೆ. ಹಾರಾಪುರ ಆರೋಗ್ಯ ಕೇಂದ್ರದಲ್ಲಿ 7 ಜನ, ಸಿಂಧನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಕಲುಷಿತ ನೀರಿನ ಸೇವನೆಯಿಂದ ವಾಂತಿ–ಭೇದಿಯಾಗಿದೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನಾಗರಾಜ ಕಾಟವಾ ತಿಳಿಸಿದ್ದಾರೆ.</p>.<p>‘ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಅನ್ನು 2 ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ. ಟ್ಯಾಂಕ್ನ ಕಬ್ಬಿಣದ ಮೆಟ್ಟಿಲು ತುಕ್ಕು ಹಿಡಿದಿದ್ದು, ಅದರ ತುಣುಕು ನೀರಿನಲ್ಲಿ ಸೇರಿವೆ. ನೀರು ಕುಡಿಯಲು ಯೋಗ್ಯವೇ ಎಂಬುದನ್ನು ಪರೀಕ್ಷಿಸದೇ ಪೂರೈಸಿರುವುದೇ ಘಟನೆಗೆ ಕಾರಣ’ ಎಂದು ಗ್ರಾಮದ ಮುಖಂಡರಾದ ವೆಂಕನಗೌಡ ಪೊಲೀಸ್ ಪಾಟೀಲ ಹಾಗೂ ಖಾಜಾಹುಸೇನ್ ಆರೋಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು (ರಾಯಚೂರು ಜಿಲ್ಲೆ): ತಾಲ್ಲೂಕಿನ ಭೂತಲದಿನ್ನಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ–ಭೇದಿ ಕಾಣಿಸಿಕೊಂಡ ಪರಿಣಾಮ 40 ಜನ ಅಸ್ವಸ್ಥಗೊಂಡಿದ್ದಾರೆ.</p>.<p>‘ಭೂತಲದಿನ್ನಿ ಆರೋಗ್ಯ ಕೇಂದ್ರದಲ್ಲಿ 27 ಜನ ಚಿಕಿತ್ಸೆ ಪಡೆದಿದ್ದಾರೆ. ಹಾರಾಪುರ ಆರೋಗ್ಯ ಕೇಂದ್ರದಲ್ಲಿ 7 ಜನ, ಸಿಂಧನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಇಬ್ಬರು ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ.ಕಲುಷಿತ ನೀರಿನ ಸೇವನೆಯಿಂದ ವಾಂತಿ–ಭೇದಿಯಾಗಿದೆ’ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ನಾಗರಾಜ ಕಾಟವಾ ತಿಳಿಸಿದ್ದಾರೆ.</p>.<p>‘ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಅನ್ನು 2 ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ. ಟ್ಯಾಂಕ್ನ ಕಬ್ಬಿಣದ ಮೆಟ್ಟಿಲು ತುಕ್ಕು ಹಿಡಿದಿದ್ದು, ಅದರ ತುಣುಕು ನೀರಿನಲ್ಲಿ ಸೇರಿವೆ. ನೀರು ಕುಡಿಯಲು ಯೋಗ್ಯವೇ ಎಂಬುದನ್ನು ಪರೀಕ್ಷಿಸದೇ ಪೂರೈಸಿರುವುದೇ ಘಟನೆಗೆ ಕಾರಣ’ ಎಂದು ಗ್ರಾಮದ ಮುಖಂಡರಾದ ವೆಂಕನಗೌಡ ಪೊಲೀಸ್ ಪಾಟೀಲ ಹಾಗೂ ಖಾಜಾಹುಸೇನ್ ಆರೋಪಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>