ಜೂನ್ 13ರಂದು ರಥೋತ್ಸವ ನಡೆಯಲಿದ್ದು, 14ರಂದು ಉಚ್ಛ್ರಾಯ ಕಾರ್ಯಕ್ರಮ ನಡೆಯಲಿದೆ. ರಾಜಕೀಯ ವೈಷಮ್ಯ, ಅಸೂಯೆಯಿಂದ ಗುಂಪು ಘರ್ಷಣೆಗಳು ಆಗುವ ಸಾಧ್ಯತೆಯಿದೆ. ಇದರಿಂದ ಅಮಾಯಕ ಭಕ್ತರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಆದ್ದರಿಂದ ಭದ್ರತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.