ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುದಗಲ್: ಕನ್ನಡ ಬಾವುಟ ಮೆರವಣಿಗೆ

Last Updated 1 ಡಿಸೆಂಬರ್ 2021, 7:10 IST
ಅಕ್ಷರ ಗಾತ್ರ

ಮುದಗಲ್: ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ಬಾವುಟದ ಮೆರವಣಿಗೆ ನಡೆಯಿತು.

ಸೀಕ್ರೆಟ್ ಹಾರ್ಟ್ ಇಂಗ್ಲಿಷ್‌ ಮಾಧ್ಯಮ ಶಾಲೆ ಆವರಣದಿಂದ ಪುರಸಭೆಯ ರಂಗಮಂದಿರದವರೆಗೂ ಭುವನೇಶ್ವರಿ ದೇವಿ ಭಾವಚಿತ್ರದ ಜತೆಗೆ 825 ಅಡಿ ಉದ್ದದ ಕನ್ನಡ ಬಾವುಟದ ಮೆರವಣಿಗೆ ಮಾಡಲಾಯಿತು. ನಂತರ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಹೂ ಮಾಲೆ ಹಾಕಿ, ಪೂಜೆ ಸಲ್ಲಿಸಲಾಯಿತು.

ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಜಿಲಾನಿ ಪಾಷಾ ಧ್ವಜಾರೋಹಣ ನೆರವೇರಿಸಿದರು.

ಮುದಗಲ್ ಘಟಕದ ಅಧ್ಯಕ್ಷ ಎಸ್.ಎ.ನಯೀಮ್, ಎಸ್.ಎನ್.ಖಾದ್ರಿ, ಅಜೀಜ್ ಪಾಷಾ, ಸಂತೋಷ ಸುರಪುರ, ನಗರ ಘಟಕದ ಅಧ್ಯಕ್ಷ ಸಾಬುಹುಸೇನ್, ಬಾಲಪ್ಪ ನಾಗರಾಳ, ದೌವಲಸಾಬ ಹಲ್ಕಾವಟಗಿ, ಮಾಹಾಂತೇಶ ಚೆಟ್ಟರ್, ಇಸ್ಮಾಯಿಲ್ ಬಳಿಗಾರ, ಜಮೀರ್, ಸೇರಿದಂತೆ ಶಾಲೆ ಮಕ್ಕಳು ಹಾಗೂ ಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT