<p><strong>ತುರ್ವಿಹಾಳ:</strong> ‘ಕನ್ನಡ ನಾಡು–ನುಡಿಯ ಕುರಿತು ಅಭಿಮಾನ ಬೆಳೆಸಿಕೊಂಡಾಗ ಮಾತ್ರ ಭಾಷೆ ಹಾಗೂ ಸಂಸ್ಕೃತಿ ಉಳಿಸಲು ಸಾಧ್ಯ’ ಎಂದು ಶಂಕ್ರಗೌಡ ಯುವಕ ಸಂಘದ ಅಧ್ಯಕ್ಷ ಮಲ್ಲಯ್ಯ ಭಂಗಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಡಿ.ಶಂಕ್ರಗೌಡ ಯುವಕ ಮಂಡಳಿ ಭವನದ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ನಂಜುಂಡಪ್ಪ ವರದಿ ಅನುಷ್ಠಾನಗೊಳಿಸಬೇಕು. ಕೃಷಿ ಅಭಿವೃದ್ಧಿಗೆ ಒತ್ತು ನೀಡಬೇಕು. ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದರು.</p>.<p>ಆರಂಭದಲ್ಲಿ ಮಾದಯ್ಯಗುರುವಿನ ಹಾಗೂ ಅಮರಗುಂಡಯ್ಯ ತಾತನವರು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ಮಲ್ಲನಗೌಡ ದೇವರಮನಿ, ಮೌಲಪ್ಪಯ್ಯ ಗುತ್ತೇದಾರ, ಶೇಖರಗೌಡ ದೇವರಮನಿ, ಬಾಪುಗೌಡ ದೇವರಮನಿ, ಮಲ್ಲಪ್ಪ ಮಡಿವಾಳ, ಮುನಿಯಪ್ಪ ಬೆಳ್ಳಿ, ಮರಿಸ್ವಾಮಿ ಹತ್ತಿಗುಡ್ಡ, ಅನ್ವರ್ ಪಾಷಾ, ಅಮರೇಶ ಗುಡೂರು, ವೀರೇಶ ನವಲಹಳ್ಳಿ, ಶಂಕ್ರಗೌಡ, ಶುಕಮುನಿ, ರಾಜು, ಶರಣಪ್ಪ ಬೇರ್ಗಿ ಹಾಗೂ ದಯಾನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರ್ವಿಹಾಳ:</strong> ‘ಕನ್ನಡ ನಾಡು–ನುಡಿಯ ಕುರಿತು ಅಭಿಮಾನ ಬೆಳೆಸಿಕೊಂಡಾಗ ಮಾತ್ರ ಭಾಷೆ ಹಾಗೂ ಸಂಸ್ಕೃತಿ ಉಳಿಸಲು ಸಾಧ್ಯ’ ಎಂದು ಶಂಕ್ರಗೌಡ ಯುವಕ ಸಂಘದ ಅಧ್ಯಕ್ಷ ಮಲ್ಲಯ್ಯ ಭಂಗಿ ಅಭಿಪ್ರಾಯಪಟ್ಟರು.</p>.<p>ಪಟ್ಟಣದ ಡಿ.ಶಂಕ್ರಗೌಡ ಯುವಕ ಮಂಡಳಿ ಭವನದ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ನಂಜುಂಡಪ್ಪ ವರದಿ ಅನುಷ್ಠಾನಗೊಳಿಸಬೇಕು. ಕೃಷಿ ಅಭಿವೃದ್ಧಿಗೆ ಒತ್ತು ನೀಡಬೇಕು. ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದರು.</p>.<p>ಆರಂಭದಲ್ಲಿ ಮಾದಯ್ಯಗುರುವಿನ ಹಾಗೂ ಅಮರಗುಂಡಯ್ಯ ತಾತನವರು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ಮಲ್ಲನಗೌಡ ದೇವರಮನಿ, ಮೌಲಪ್ಪಯ್ಯ ಗುತ್ತೇದಾರ, ಶೇಖರಗೌಡ ದೇವರಮನಿ, ಬಾಪುಗೌಡ ದೇವರಮನಿ, ಮಲ್ಲಪ್ಪ ಮಡಿವಾಳ, ಮುನಿಯಪ್ಪ ಬೆಳ್ಳಿ, ಮರಿಸ್ವಾಮಿ ಹತ್ತಿಗುಡ್ಡ, ಅನ್ವರ್ ಪಾಷಾ, ಅಮರೇಶ ಗುಡೂರು, ವೀರೇಶ ನವಲಹಳ್ಳಿ, ಶಂಕ್ರಗೌಡ, ಶುಕಮುನಿ, ರಾಜು, ಶರಣಪ್ಪ ಬೇರ್ಗಿ ಹಾಗೂ ದಯಾನಂದ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>