<p><strong>ಶಕ್ತಿನಗರ: ‘</strong>ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದು ಶಕ್ತಿನಗರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವಿಜಯಕುಮಾರ ಗಣಾಚಾರಿ ಹೇಳಿದರು.</p>.<p>ಶಕ್ತಿನಗರ ಕನ್ನಡ ಕ್ರಿಯಾ ಸಮಿತಿ ಕಚೇರಿ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ಕನ್ನಡಿಗರಾದ ನಾವು ಅನ್ಯ ಭಾಷೆಗಳ ಪ್ರಭಾವಕ್ಕೊಳಗಾಗಿ ಕನ್ನಡ ಬಳಸುವುದನ್ನು ಕಡಿಮೆ ಮಾಡುತ್ತಿದ್ದೇವೆ. ಕನ್ನಡ ಭಾಷೆಯ ಏಳಿಗೆ ಹಾಗೂ ಉಳಿವಿಗಾಗಿ ಶ್ರಮಿಸುವ ಅಗತ್ಯವಿದೆ ಎಂದರು.</p>.<p>ಶಕ್ತಿನಗರ ಕನ್ನಡ ಕ್ರಿಯಾ ಸಮಿತಿ ವತಿಯಿಂದ ತತ್ವಪದ ಕಲಾವಿದ ಸೂಗಪ್ಪ ಗುಡೇಬಲ್ಲೂರ, ಹವ್ಯಾಸಿ ರಂಗ ಕಲಾವಿದ ಅಣ್ಣವೀರಯ್ಯಾ ಸ್ವಾಮಿ, ಕುಮಾರ್. ವಚನ ಕಂಠಪಾಠ, ವಿಜಯ್ ಇಂಗಳಗಿ, ಚಿತ್ರ ಕಲಾವಿದ ಮಲ್ಲಿಕಾರ್ಜುನ ವಿಭೂತಿ, ಬರಹಗಾರ ಮಂಜುನಾಥ ಗುತ್ತೇದಾರ ಅವರನ್ನು ಸನ್ಮಾನಿಸಲಾಯಿತು.</p>.<p>ಆಂಜನೇಯ ಜಾಲಿಬೆಂಚಿ, ಅಮರೇಗೌಡ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಮಹೇಶಸ್ವಾಮಿ ನಿರೂಪಿಸಿದರು.</p>.<p>ಕನ್ನಡ ಕ್ರಿಯಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಬಶೀರ್ ಅಹ್ಮದ್, ಗೌರವಾಧ್ಯಕ್ಷ ಎಸ್.ಎಸ್.ಮ್ಯಾದಾರ್, ಶಕ್ತಿನಗರ ಕನ್ನಡ ಕ್ರಿಯಾ ಸಮಿತಿ ಗೌರವಾಧ್ಯಕ್ಷ ಶಿವಶರಣಯ್ಯ ಸ್ವಾಮಿ, ಉಪಾಧ್ಯಕ್ಷ ಸಂತೋಷ್ ಯಾದವಾಡ , ಬಿ.ಸುಜಯ್, ಸಹ ಕಾರ್ಯದರ್ಶಿ ಗುರುರಾಜ್ ಅಂಬಿಗೇರ, ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಅರುಣ್ ಕುಮಾರ್, ಅಮರಪ್ಪ ಗೌಡ, ಮಹೇಶ್ ಪೊಲೀಸ್ ಪಾಟೀಲ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ: ‘</strong>ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದು ಶಕ್ತಿನಗರ ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ವಿಜಯಕುಮಾರ ಗಣಾಚಾರಿ ಹೇಳಿದರು.</p>.<p>ಶಕ್ತಿನಗರ ಕನ್ನಡ ಕ್ರಿಯಾ ಸಮಿತಿ ಕಚೇರಿ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ಕನ್ನಡಿಗರಾದ ನಾವು ಅನ್ಯ ಭಾಷೆಗಳ ಪ್ರಭಾವಕ್ಕೊಳಗಾಗಿ ಕನ್ನಡ ಬಳಸುವುದನ್ನು ಕಡಿಮೆ ಮಾಡುತ್ತಿದ್ದೇವೆ. ಕನ್ನಡ ಭಾಷೆಯ ಏಳಿಗೆ ಹಾಗೂ ಉಳಿವಿಗಾಗಿ ಶ್ರಮಿಸುವ ಅಗತ್ಯವಿದೆ ಎಂದರು.</p>.<p>ಶಕ್ತಿನಗರ ಕನ್ನಡ ಕ್ರಿಯಾ ಸಮಿತಿ ವತಿಯಿಂದ ತತ್ವಪದ ಕಲಾವಿದ ಸೂಗಪ್ಪ ಗುಡೇಬಲ್ಲೂರ, ಹವ್ಯಾಸಿ ರಂಗ ಕಲಾವಿದ ಅಣ್ಣವೀರಯ್ಯಾ ಸ್ವಾಮಿ, ಕುಮಾರ್. ವಚನ ಕಂಠಪಾಠ, ವಿಜಯ್ ಇಂಗಳಗಿ, ಚಿತ್ರ ಕಲಾವಿದ ಮಲ್ಲಿಕಾರ್ಜುನ ವಿಭೂತಿ, ಬರಹಗಾರ ಮಂಜುನಾಥ ಗುತ್ತೇದಾರ ಅವರನ್ನು ಸನ್ಮಾನಿಸಲಾಯಿತು.</p>.<p>ಆಂಜನೇಯ ಜಾಲಿಬೆಂಚಿ, ಅಮರೇಗೌಡ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಮಹೇಶಸ್ವಾಮಿ ನಿರೂಪಿಸಿದರು.</p>.<p>ಕನ್ನಡ ಕ್ರಿಯಾ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಬಶೀರ್ ಅಹ್ಮದ್, ಗೌರವಾಧ್ಯಕ್ಷ ಎಸ್.ಎಸ್.ಮ್ಯಾದಾರ್, ಶಕ್ತಿನಗರ ಕನ್ನಡ ಕ್ರಿಯಾ ಸಮಿತಿ ಗೌರವಾಧ್ಯಕ್ಷ ಶಿವಶರಣಯ್ಯ ಸ್ವಾಮಿ, ಉಪಾಧ್ಯಕ್ಷ ಸಂತೋಷ್ ಯಾದವಾಡ , ಬಿ.ಸುಜಯ್, ಸಹ ಕಾರ್ಯದರ್ಶಿ ಗುರುರಾಜ್ ಅಂಬಿಗೇರ, ತಾಲ್ಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ, ಅರುಣ್ ಕುಮಾರ್, ಅಮರಪ್ಪ ಗೌಡ, ಮಹೇಶ್ ಪೊಲೀಸ್ ಪಾಟೀಲ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>