ತುರ್ವಿಹಾಳ: ‘ಕನ್ನಡ ನಾಡು–ನುಡಿಯ ಕುರಿತು ಅಭಿಮಾನ ಬೆಳೆಸಿಕೊಂಡಾಗ ಮಾತ್ರ ಭಾಷೆ ಹಾಗೂ ಸಂಸ್ಕೃತಿ ಉಳಿಸಲು ಸಾಧ್ಯ’ ಎಂದು ಶಂಕ್ರಗೌಡ ಯುವಕ ಸಂಘದ ಅಧ್ಯಕ್ಷ ಮಲ್ಲಯ್ಯ ಭಂಗಿ ಅಭಿಪ್ರಾಯಪಟ್ಟರು.
ಪಟ್ಟಣದ ಡಿ.ಶಂಕ್ರಗೌಡ ಯುವಕ ಮಂಡಳಿ ಭವನದ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ನಂಜುಂಡಪ್ಪ ವರದಿ ಅನುಷ್ಠಾನಗೊಳಿಸಬೇಕು. ಕೃಷಿ ಅಭಿವೃದ್ಧಿಗೆ ಒತ್ತು ನೀಡಬೇಕು. ಕೈಗಾರಿಕೆಗಳನ್ನು ಸ್ಥಾಪಿಸಬೇಕು ಎಂದರು.
ಆರಂಭದಲ್ಲಿ ಮಾದಯ್ಯಗುರುವಿನ ಹಾಗೂ ಅಮರಗುಂಡಯ್ಯ ತಾತನವರು ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.