<p><strong>ಮಾನ್ವಿ (ರಾಯಚೂರು ಜಿಲ್ಲೆ):</strong> ಜಿಲ್ಲೆಯ ಹೆಸರಾಂತ ಗಾಯಕ ಅಂಬಯ್ಯ ನುಲಿ ಅವರು 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಸಂಗೀತ ಕ್ಷೇತ್ರದಲ್ಲಿ 35 ವರ್ಷಗಳಿಂದ ಮಾಡಿರುವ ಸಾಧನೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರಾದ ಅಂಬಯ್ಯ ಅವರು ಪಂಡಿತ್ ನಾರಾಯಣ ಢಗೆ ಅವರಲ್ಲಿ ಹಿಂದುಸ್ತಾನಿ ಸುಗಮ ಸಂಗೀತಾಭ್ಯಾಸ ಮಾಡಿದ್ದಾರೆ. ಶರಣರ ವಚನಗಳು, ದಾಸರ ಕೀರ್ತನೆಗಳು, ಭಾವಗೀತೆಗಳನ್ನು ಗಾಯನ ಮಾಡಿ ಜನ ಮನ್ನಣೆ ಸಂಪಾದಿಸಿದ್ದಾರೆ.</p>.<p>ಪ್ರಾಥಮಿಕ ಶಾಲಾ ಶಿಕ್ಷಕ ವೃತ್ತಿಯಲ್ಲಿದ್ದು ಮಾನ್ವಿ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ. ಇದುವರೆಗೂ 180ಕ್ಕೂ ಹೆಚ್ಚು ಗಾಯನ ಸಿ.ಡಿ. ಬಿಡುಗಡೆ ಆಗಿವೆ. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ನೆರೆಯ ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಲ್ಲಿ ಹಾಗೂ ಬಹರೈನ್, ಅಮೆರಿಕದಲ್ಲಿಯೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾನ್ವಿ (ರಾಯಚೂರು ಜಿಲ್ಲೆ):</strong> ಜಿಲ್ಲೆಯ ಹೆಸರಾಂತ ಗಾಯಕ ಅಂಬಯ್ಯ ನುಲಿ ಅವರು 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p>.<p>ಸಂಗೀತ ಕ್ಷೇತ್ರದಲ್ಲಿ 35 ವರ್ಷಗಳಿಂದ ಮಾಡಿರುವ ಸಾಧನೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಾಥಮಿಕ ಶಾಲಾ ಶಿಕ್ಷಕರಾದ ಅಂಬಯ್ಯ ಅವರು ಪಂಡಿತ್ ನಾರಾಯಣ ಢಗೆ ಅವರಲ್ಲಿ ಹಿಂದುಸ್ತಾನಿ ಸುಗಮ ಸಂಗೀತಾಭ್ಯಾಸ ಮಾಡಿದ್ದಾರೆ. ಶರಣರ ವಚನಗಳು, ದಾಸರ ಕೀರ್ತನೆಗಳು, ಭಾವಗೀತೆಗಳನ್ನು ಗಾಯನ ಮಾಡಿ ಜನ ಮನ್ನಣೆ ಸಂಪಾದಿಸಿದ್ದಾರೆ.</p>.<p>ಪ್ರಾಥಮಿಕ ಶಾಲಾ ಶಿಕ್ಷಕ ವೃತ್ತಿಯಲ್ಲಿದ್ದು ಮಾನ್ವಿ ಪಟ್ಟಣದಲ್ಲಿ ವಾಸಿಸುತ್ತಿದ್ದಾರೆ. ಇದುವರೆಗೂ 180ಕ್ಕೂ ಹೆಚ್ಚು ಗಾಯನ ಸಿ.ಡಿ. ಬಿಡುಗಡೆ ಆಗಿವೆ. ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ನೆರೆಯ ಕೇರಳ, ಆಂಧ್ರಪ್ರದೇಶ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಲ್ಲಿ ಹಾಗೂ ಬಹರೈನ್, ಅಮೆರಿಕದಲ್ಲಿಯೂ ಸಂಗೀತ ಕಾರ್ಯಕ್ರಮಗಳನ್ನು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>