ಭಾನುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ಪದಗ್ರಹಣ, ಕಾರ್ಯಚಟುವಟಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ಆಧುನಿಕತೆ ಭರಾಟೆಯಲ್ಲಿ ಕನ್ನಡ ಭಾಷೆ, ನೆಲ, ಜಲ ಸಂರಕ್ಷಿಸುವಲ್ಲಿ ಯುವ ಸಮೂಹ ಮುಂದಾಗುತ್ತಿಲ್ಲ. ಸಾಹಿತ್ಯ ಪರಿಷತ್ತು ಗ್ರಾಮ ಮಟ್ಟದಲ್ಲಿ ಕಾರ್ಯಚಟುವಟಿಕೆ ಆಯೋಜಿಸುವ ಮೂಲಕ ಜನಸಾಮಾನ್ಯರಲ್ಲಿ ಕನ್ನಡದ ಸ್ವಾಭಿಮಾನ ಬೆಳೆಸಲು ವಿಶೇಷ ಆಸಕ್ತಿ ವಹಿಸಬೇಕು’ ಎಂದು ಸಲಹೆ ನೀಡಿದರು.