ರಾಯಚೂರು: ‘ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಸ್ಥಾನದಿಂದ ಪಲಗುಲ ನಾಗರಾಜ ನಾಮಪತ್ರ ಹಿಂಪಡೆದಿದ್ದು ಭೀಮನಗೌಡ ಇಟಗಿ ಅವರಿಗೆ ಬೆಂಬಲ ಸೂಚಿಸಲಿದ್ದಾರೆ. ಈಗಾಗಲೇ ಎಲ್ಲಾ ತಾಲ್ಲೂಕುಗಳಲ್ಲಿ ಪ್ರಚಾರ ಮಾಡುತ್ತಿದ್ದು ಭೀಮನಗೌಡ ಇಟಗಿ ಅವರ ಬೆಂಬಲ ಹೆಚ್ಚಾಗುತ್ತಿದ್ದು, ಸಕರಾತ್ಮಕವಾದ ಸ್ಪಂದನೆ ದೊರೆಯುತ್ತಿದೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಲಿ ಅಧ್ಯಕ್ಷ ಡಾ.ಬಸವಪ್ರಭು ಪಾಟೀಲ ಬೆಟ್ಟದೂರು ಹೇಳಿದರು.