<p><strong>ರಾಯಚೂರು: </strong>ಕನ್ನಡ ರಾಜ್ಯೋತ್ಸವದ ನಿಮಿತ್ತ ಲಕ್ಷ ಕಂಠಗಳ ಕನ್ನಡ ಗೀತಗಾಯನ ನಗರದಾದ್ಯಂತ ಗುರುವಾರ ಅನುರಣಿಸಿತು.</p>.<p>ಜಿಲ್ಲಾಧಿಕಾರಿ ಕಚೇರಿ ಅವರಣ, ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ, ಹಾಗೂ ಎಸ್ ಎಸ್ ಆರ್ ಜಿ ಮಹಿಳಾ ಕಾಲೇಜು ಆವರಣದಲ್ಲಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಹಾಗೂ ಕನ್ನಡ ಅಭಿಮಾನಿಗಳು ಏಕಕಾಲಕ್ಕೆ ಕನ್ನಡ ಗೀತ ಗಾಯನ ಮೊಳಗಿಸಿದರು.</p>.<p>ಆರಂಭದಲ್ಲಿ ನಾಡಗೀತೆ ಗಾಯನದ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಆನಂತರ 'ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ' ' ಜೋಗದ ಸಿರಿ ಬೆಳಕಿನಲ್ಲಿ...' ಹಾಗೂ 'ಹಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಗೀತೆಗಳನ್ನು ಒಂದಾದ ನಂತರ ಒಂದು ಸುಶ್ರಾವ್ಯವಾಗಿ ಗಾಯನ ಮಾಡಿದ್ದು ವಿಶೇಷವಾಗಿತ್ತು.</p>.<p>ಏಕಕಾಲದಲ್ಲಿ ನೂರಾರು ಖಂಡಗಳಲ್ಲಿ ತುಂಬಿದ ಕನ್ನಡ ಗೀತೆಗಳು ಕೇಳುವುದಕ್ಕೆ ಆನಂದವಾಗಿತ್ತು.<br />ಕಾರ್ಯಕ್ರಮದಲ್ಲಿ ಸೇರಿದ್ದ ಎಲ್ಲರೂ ಕನ್ನಡ ಭಾಷೆ ಉಳಿಸುವ ಬಳಸುವ ಬಗ್ಗೆ ಸಂಕಲ್ಪ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿತ್ತು.</p>.<p>ಶಾಸಕ ಡಾ. ಶಿವರಾಜ್ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಮಂಗಳಾ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಕನ್ನಡ ರಾಜ್ಯೋತ್ಸವದ ನಿಮಿತ್ತ ಲಕ್ಷ ಕಂಠಗಳ ಕನ್ನಡ ಗೀತಗಾಯನ ನಗರದಾದ್ಯಂತ ಗುರುವಾರ ಅನುರಣಿಸಿತು.</p>.<p>ಜಿಲ್ಲಾಧಿಕಾರಿ ಕಚೇರಿ ಅವರಣ, ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ, ಹಾಗೂ ಎಸ್ ಎಸ್ ಆರ್ ಜಿ ಮಹಿಳಾ ಕಾಲೇಜು ಆವರಣದಲ್ಲಿ ಸೇರಿದ್ದ ನೂರಾರು ವಿದ್ಯಾರ್ಥಿಗಳು ಹಾಗೂ ಕನ್ನಡ ಅಭಿಮಾನಿಗಳು ಏಕಕಾಲಕ್ಕೆ ಕನ್ನಡ ಗೀತ ಗಾಯನ ಮೊಳಗಿಸಿದರು.</p>.<p>ಆರಂಭದಲ್ಲಿ ನಾಡಗೀತೆ ಗಾಯನದ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಆನಂತರ 'ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯಶಿವ' ' ಜೋಗದ ಸಿರಿ ಬೆಳಕಿನಲ್ಲಿ...' ಹಾಗೂ 'ಹಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಗೀತೆಗಳನ್ನು ಒಂದಾದ ನಂತರ ಒಂದು ಸುಶ್ರಾವ್ಯವಾಗಿ ಗಾಯನ ಮಾಡಿದ್ದು ವಿಶೇಷವಾಗಿತ್ತು.</p>.<p>ಏಕಕಾಲದಲ್ಲಿ ನೂರಾರು ಖಂಡಗಳಲ್ಲಿ ತುಂಬಿದ ಕನ್ನಡ ಗೀತೆಗಳು ಕೇಳುವುದಕ್ಕೆ ಆನಂದವಾಗಿತ್ತು.<br />ಕಾರ್ಯಕ್ರಮದಲ್ಲಿ ಸೇರಿದ್ದ ಎಲ್ಲರೂ ಕನ್ನಡ ಭಾಷೆ ಉಳಿಸುವ ಬಳಸುವ ಬಗ್ಗೆ ಸಂಕಲ್ಪ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಈ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲಾಗಿತ್ತು.</p>.<p>ಶಾಸಕ ಡಾ. ಶಿವರಾಜ್ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ, ಉಪವಿಭಾಗಾಧಿಕಾರಿ ಸಂತೋಷ ಕಾಮಗೌಡ, ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಮಂಗಳಾ ನಾಯಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>