<p><strong>ರಾಯಚೂರು:</strong> ಮೆಗಾಸ್ಟಾರ್ ಚಿರಂಜಿವಿ ನಟಿಸಿರುವ ‘ಸೈರಾ ನರಸಿಂಹರೆಡ್ಡಿ’ ಸಿನಿಮಾ ತೆಲುಗು ಭಾಷೆಯಲ್ಲಿ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ನೀಲಕಂಠೇಶ್ವರ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಸದಸ್ಯರನ್ನು ಪೊಲೀಸರು ಬುಧವಾರ ಬಂಧಿಸಿ, ಆನಂತರ ಬಿಡುಗಡೆಗೊಳಿಸಿದರು.</p>.<p>ನಾಲ್ಕು ಭಾಷೆಯಲ್ಲಿ ಸಿನಿಮಾ ತೆರೆಕಂಡಿದ್ದರೂ ಚಿತ್ರಮಂದಿರದ ಮಾಲೀಕರು ತೆಲುಗು ಭಾಷೆಯಲ್ಲಿ ಚಿತ್ರ ಪ್ರದರ್ಶನ ಮಾಡುತ್ತಿದ್ದಾರೆ. ಆದ್ದರಿಂದ ತೆಲುಗು ಭಾಷೆಯಲ್ಲಿ ಚಿತ್ರಪ್ರದರ್ಶನ ರದ್ದುಪಡಿಸಿ, ಕನ್ನಡ ಭಾಷೆಯಲ್ಲಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕನ್ನಡ ಭಾಷೆಯಲ್ಲಿ ಕೂಡ ಸಿನಿಮಾ ಮಾಡಲಾಗಿದ್ದು, ಕನ್ನಡದ ನಟ ಸುದೀಪ ಅಭಿನಯಿಸಿದ್ದಾರೆ. ಆದ್ದರಿಂದ ಕರ್ನಾಟಕದಲ್ಲಿ ಸಿನಿಮಾ ಕನ್ನಡ ಭಾಷೆಯಲ್ಲಿ ಪ್ರದರ್ಶನ ಮಾಡಬೇಕು. ಇದರಿಂದ ಪರಭಾಷಿಕರು ಕೂಡ ಕನ್ನಡ ಕಲಿಯಲು ಸಹಾಯವಾಗಲಿದೆ ಎಂದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ವಿನೋದರೆಡ್ಡಿ, ಕೊಂಡಪ್ಪ, ರಮೇಶ ಪಡಕೋಟೆ, ಟಿ.ವಿರುಪಾಕ್ಷಿ, ಸಾಧಿಕ್, ಹೊನ್ನಪ್ಪ, ಚಾಂದಪಾಷ, ಫೆರೋಜ್, ಬಿ.ಎಂ.ವಿಶಾಲ್, ನರಸಿಂಹ ಯಾದವ್, ಮೌಲಾಲಿ, ಶರಣಪ್ಪ, ನರಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮೆಗಾಸ್ಟಾರ್ ಚಿರಂಜಿವಿ ನಟಿಸಿರುವ ‘ಸೈರಾ ನರಸಿಂಹರೆಡ್ಡಿ’ ಸಿನಿಮಾ ತೆಲುಗು ಭಾಷೆಯಲ್ಲಿ ಬಿಡುಗಡೆ ಮಾಡಿರುವುದನ್ನು ವಿರೋಧಿಸಿ ನೀಲಕಂಠೇಶ್ವರ ಚಿತ್ರಮಂದಿರದ ಎದುರು ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ) ಜಿಲ್ಲಾ ಘಟಕದ ಸದಸ್ಯರನ್ನು ಪೊಲೀಸರು ಬುಧವಾರ ಬಂಧಿಸಿ, ಆನಂತರ ಬಿಡುಗಡೆಗೊಳಿಸಿದರು.</p>.<p>ನಾಲ್ಕು ಭಾಷೆಯಲ್ಲಿ ಸಿನಿಮಾ ತೆರೆಕಂಡಿದ್ದರೂ ಚಿತ್ರಮಂದಿರದ ಮಾಲೀಕರು ತೆಲುಗು ಭಾಷೆಯಲ್ಲಿ ಚಿತ್ರ ಪ್ರದರ್ಶನ ಮಾಡುತ್ತಿದ್ದಾರೆ. ಆದ್ದರಿಂದ ತೆಲುಗು ಭಾಷೆಯಲ್ಲಿ ಚಿತ್ರಪ್ರದರ್ಶನ ರದ್ದುಪಡಿಸಿ, ಕನ್ನಡ ಭಾಷೆಯಲ್ಲಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಕನ್ನಡ ಭಾಷೆಯಲ್ಲಿ ಕೂಡ ಸಿನಿಮಾ ಮಾಡಲಾಗಿದ್ದು, ಕನ್ನಡದ ನಟ ಸುದೀಪ ಅಭಿನಯಿಸಿದ್ದಾರೆ. ಆದ್ದರಿಂದ ಕರ್ನಾಟಕದಲ್ಲಿ ಸಿನಿಮಾ ಕನ್ನಡ ಭಾಷೆಯಲ್ಲಿ ಪ್ರದರ್ಶನ ಮಾಡಬೇಕು. ಇದರಿಂದ ಪರಭಾಷಿಕರು ಕೂಡ ಕನ್ನಡ ಕಲಿಯಲು ಸಹಾಯವಾಗಲಿದೆ ಎಂದರು.</p>.<p>ಜಿಲ್ಲಾ ಘಟಕದ ಅಧ್ಯಕ್ಷ ವಿನೋದರೆಡ್ಡಿ, ಕೊಂಡಪ್ಪ, ರಮೇಶ ಪಡಕೋಟೆ, ಟಿ.ವಿರುಪಾಕ್ಷಿ, ಸಾಧಿಕ್, ಹೊನ್ನಪ್ಪ, ಚಾಂದಪಾಷ, ಫೆರೋಜ್, ಬಿ.ಎಂ.ವಿಶಾಲ್, ನರಸಿಂಹ ಯಾದವ್, ಮೌಲಾಲಿ, ಶರಣಪ್ಪ, ನರಸಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>