ರಾಯಚೂರು: ‘ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವುದನ್ನು ತಡೆಯುವುದಕ್ಕಾಗಿ ಸೋಂಕಿತರನ್ನು ಕೇರ್ ಸೆಂಟರ್ಗಳಿಗೆ ಇರಿಸುವ ವ್ಯವಸ್ಥೆ ಮಾಡಲಾಗುತ್ತಿದೆ. ಕೋವಿಡ್ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದ್ದು, ಇದೀಗ ಎಲ್ಲ ವೈದ್ಯರೊಂದಿಗೆ ಸಭೆ ನಡೆಸುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ನಗರದ ರಿಮ್ಸ್ ಆಸ್ಪತ್ರೆಗೆ ಭೇಟಿಗಾಗಿ ಶನಿವಾರ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.
ಆಮ್ಲಜನಕದ ಕೊರತೆ ಇಲ್ಲ. ಇನ್ನೂ 24 ಟನ್ ಸಂಗ್ರಹವಿದೆ. ವೆಂಟಿಲೇಟರ್ ಸಮಸ್ಯೆ ಇದುವರೆಗೂ ಬಂದಿಲ್ಲ ಎಂದರು. ಸೋಂಕಿತರು ಗುಣಮುಖ ಆಗುವುದಕ್ಕೆ ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಶಾಸಕ ಶಿವನಗೌಡ ನಾಯಕ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ರಿಮ್ಸ್ ನಿರ್ದೇಶಕ ಡಾ.ಬಸವರಾಜ ಪೀರಾಪುರ ಮತ್ತಿತರರು ಇದ್ದರು.