ಗುರುವಾರ ವಿಡಿಯೋ ಸಂದೇಶ ನೀಡಿರುವ ಅವರು, ‘ಬುಧವಾರ ರಾತ್ರಿ ಅಂಗಡಿಯೊಂದರಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿದೆ. ಕರ್ನಾಟಕದ ಭಕ್ತನ ಮೇಲೆ ಹಲ್ಲೆಯಾಗಿದೆ. ಆದರೆ, ಕರ್ನಾಟಕದ ಭಕ್ತ ಮೃತಪಟ್ಟಿದ್ದಾನೆ ಎಂದು ಸುದ್ದಿ ಹರಡಿದ್ದರಿಂದ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪರಿಸ್ಥಿತಿ ಕೈಮೀರುವ ಹಂತದಲ್ಲಿ ಮಧ್ಯಪ್ರವೇಶಿಸಿ ಎಲ್ಲರಿಗೂ ಶಾಂತಿಯಿಂದ ಇರಲು ಹೇಳಲಾಗಿದೆ‘ ಎಂದು ತಿಳಿಸಿದ್ದಾರೆ.