ನಿವೃತ್ತ ಎಂಜಿನಿಯರ್ ರುದ್ರಯ್ಯ ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ಬೆಂಗಳೂರಿನಿಂದ ಲಿಂಗಸುಗೂರಿಗೆ ಆಗಮಿಸಿದ್ದು, ಟಿಕೆಟ್ ಆಕಾಂಕ್ಷಿಯಾಗಿ ಲಿಂಗಸುಗೂರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಕೈಗೊಂಡಿದ್ದ ಸಮೀಕ್ಷೆಯಲ್ಲಿ ಹಾಲಿ ಶಾಸಕರ ವಿರುದ್ಧದ ಅಭಿಮತ ವ್ಯಕ್ತವಾಗಿದೆ ಎನ್ನುವುದು ಪಕ್ಷದ ಮೂಲಗಳ ಮಾಹಿತಿ. ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ ಅವರು ಡಿ.ಎಚ್.ಹುಲಗೇರಿ ಅವರಿಗೆ ಟಿಕೆಟ್ ನೀಡದಂತೆ ಪ್ರಭಾವ ಬೀರುತ್ತಿದ್ದಾರೆ ಎನ್ನುವುದು ಕ್ಷೇತ್ರದಾದ್ಯಂತ ಚರ್ಚೆಯಲ್ಲಿದೆ.