<p><strong>ರಾಯಚೂರು:</strong> ‘ಕೊಪ್ಪಳ–ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರವು ಕಾಂಗ್ರೆಸ್ ಪಕ್ಷದ್ದಾಗಿದ್ದು, ಯಾವುದೇ ಕಾರಣಕ್ಕೂ ಬೇರೆ ಪಕ್ಷಕ್ಕೆಬಿಟ್ಟುಕೊಡಬಾರದು. ಗೆಲುವಿಗಾಗಿ ಎಲ್ಲರೂ ಕೈ ಜೋಡಿಸಿ ಕೆಲಸ ಮಾಡಬೇಕು‘ ಎಂದು ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ ಕರೆ ನೀಡಿದರು.</p>.<p>ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಮಾತನಾಡಿದರು.</p>.<p>‘ಅವರವರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳನ್ನು ಪಡೆಯುವುದಕ್ಕೆ ಮುಖಂಡರು ಶ್ರಮಿಸಬೇಕು. ಗ್ರಾಮ ಪಂಚಾಯಿತಿ ಬಲಪಡಿಸುವುದಕ್ಕೆ ಕಾಂಗ್ರೆಸ್ ಪಕ್ಷವು ಸಾಕಷ್ಟು ಕಾಯ್ದೆಗಳನ್ನು ರೂಪಿಸಿ ಜಾರಿಮಾಡಿದೆ. ಅಧಿಕಾರದ<br />ವೀಕೇಂದ್ರೀಕರಣ ಪರಿಕಲ್ಪನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಪಕ್ಷವು ಮಾಡಿದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡ ಹಂಪನಗೌಡ ಬಾದರ್ಲಿ ಮಾತನಾಡಿ, ಸದ್ಯ ಕಾಂಗ್ರೆಸ್ ಅಭ್ಯರ್ಥಿಯುಗೆಲ್ಲುವ ವಾತಾವರಣ ಎಲ್ಲ ಕಡೆಗೂ ಎದ್ದು ಕಾಣುತ್ತಿದೆ. ಇದನ್ನು ಉಳಿಸಿಕೊಳ್ಳು ವುದಕ್ಕೆ ಮುಂದಾಗಬೇಕು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಮಾಡಿ ಪಕ್ಷಕ್ಕೆ ಮತನೀಡುವಂತೆ ಮನವೊಲಿಸಬೇಕು ಎಂದು ತಿಳಿಸಿದರು.</p>.<p>ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಮಾತನಾಡಿ, ‘ಎರಡೂ ಜಿಲ್ಲೆಗಳಲ್ಲಿರುವ ಕಾರ್ತಕರ್ತರು ಸಹಕಾರ ಕೊಟ್ಟು ಪ್ರಚಾರ<br />ಮಾಡಬೇಕು‘ ಎಂದು ಕೋರಿದರು.</p>.<p>ಶಾಸಕರಾದ ಬಸನಗೌಡ ದದ್ದಲ, ಬಸನಗೌಡ ತುರ್ವಿಹಾಳ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ.ಬಸವರಾಜರೆಡ್ಡಿ, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಬಸವರಾಜ ಪಾಟೀಲ ಇಟಗಿ, ಎ.ವಸಂತಕುಮಾರ್, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ ಹಾಗೂ ರುದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ಕೊಪ್ಪಳ–ರಾಯಚೂರು ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರವು ಕಾಂಗ್ರೆಸ್ ಪಕ್ಷದ್ದಾಗಿದ್ದು, ಯಾವುದೇ ಕಾರಣಕ್ಕೂ ಬೇರೆ ಪಕ್ಷಕ್ಕೆಬಿಟ್ಟುಕೊಡಬಾರದು. ಗೆಲುವಿಗಾಗಿ ಎಲ್ಲರೂ ಕೈ ಜೋಡಿಸಿ ಕೆಲಸ ಮಾಡಬೇಕು‘ ಎಂದು ಎಐಸಿಸಿ ಕಾರ್ಯದರ್ಶಿ ಎನ್.ಎಸ್.ಬೋಸರಾಜ ಕರೆ ನೀಡಿದರು.</p>.<p>ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಜಿಲ್ಲಾಮಟ್ಟದ ಸಮಾವೇಶದಲ್ಲಿ ಮಾತನಾಡಿದರು.</p>.<p>‘ಅವರವರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತಗಳನ್ನು ಪಡೆಯುವುದಕ್ಕೆ ಮುಖಂಡರು ಶ್ರಮಿಸಬೇಕು. ಗ್ರಾಮ ಪಂಚಾಯಿತಿ ಬಲಪಡಿಸುವುದಕ್ಕೆ ಕಾಂಗ್ರೆಸ್ ಪಕ್ಷವು ಸಾಕಷ್ಟು ಕಾಯ್ದೆಗಳನ್ನು ರೂಪಿಸಿ ಜಾರಿಮಾಡಿದೆ. ಅಧಿಕಾರದ<br />ವೀಕೇಂದ್ರೀಕರಣ ಪರಿಕಲ್ಪನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದೆ. ಪಕ್ಷವು ಮಾಡಿದ ಸಾಧನೆಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಹೇಳಿದರು.</p>.<p>ಕಾಂಗ್ರೆಸ್ ಮುಖಂಡ ಹಂಪನಗೌಡ ಬಾದರ್ಲಿ ಮಾತನಾಡಿ, ಸದ್ಯ ಕಾಂಗ್ರೆಸ್ ಅಭ್ಯರ್ಥಿಯುಗೆಲ್ಲುವ ವಾತಾವರಣ ಎಲ್ಲ ಕಡೆಗೂ ಎದ್ದು ಕಾಣುತ್ತಿದೆ. ಇದನ್ನು ಉಳಿಸಿಕೊಳ್ಳು ವುದಕ್ಕೆ ಮುಂದಾಗಬೇಕು. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿಮಾಡಿ ಪಕ್ಷಕ್ಕೆ ಮತನೀಡುವಂತೆ ಮನವೊಲಿಸಬೇಕು ಎಂದು ತಿಳಿಸಿದರು.</p>.<p>ವಿಧಾನ ಪರಿಷತ್ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಶರಣಗೌಡ ಬಯ್ಯಾಪುರ ಮಾತನಾಡಿ, ‘ಎರಡೂ ಜಿಲ್ಲೆಗಳಲ್ಲಿರುವ ಕಾರ್ತಕರ್ತರು ಸಹಕಾರ ಕೊಟ್ಟು ಪ್ರಚಾರ<br />ಮಾಡಬೇಕು‘ ಎಂದು ಕೋರಿದರು.</p>.<p>ಶಾಸಕರಾದ ಬಸನಗೌಡ ದದ್ದಲ, ಬಸನಗೌಡ ತುರ್ವಿಹಾಳ, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಜಿ.ಬಸವರಾಜರೆಡ್ಡಿ, ನಗರಸಭೆ ಸದಸ್ಯ ಜಯಣ್ಣ, ಮುಖಂಡರಾದ ಬಸವರಾಜ ಪಾಟೀಲ ಇಟಗಿ, ಎ.ವಸಂತಕುಮಾರ್, ಕೆ.ಶಾಂತಪ್ಪ, ಅಮರೇಗೌಡ ಹಂಚಿನಾಳ ಹಾಗೂ ರುದ್ರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>