ನಂತರ ಮಾತನಾಡಿದ ಅವರು, ‘ಸ್ವಾಭಿಮಾನಿ ಮತದಾರರನ್ನು ಮಾರಾಟ ಮಾಡಿ ಅವಮಾನಗೊಳಿಸಿದ, ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಅವರನ್ನು ಸೋಲಿಸಲು ಜನ ಕಾತುರದಿಂದ ಕಾಯುತ್ತಿದ್ದಾರೆ. ಚುನಾವಣಾ ಪ್ರಚಾರದ ಸಮಯದಲ್ಲಿ ಜನ ನನಗೆ ತೋರಿಸಿದ ಪ್ರೀತಿ, ಸಹಕಾರ ಹಾಗೂ ಸಿದ್ದರಾಮಯ್ಯ ಅವರ ಸರ್ಕಾರ ನೀಡಿದ ಜನಪರ ಯೋಜನೆಗಳಿಂದಲೇ ನನ್ನ ಗೆಲುವು ನಿಶ್ಚಿತ’ ಎಂಬ ಆಶಯ ವ್ಯಕ್ತಪಡಿಸಿದರು.