<p><strong>ತುರ್ವಿಹಾಳ (ರಾಯಚೂರು ಜಿಲ್ಲೆ):</strong> ‘ಮಸ್ಕಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದುಡ್ಡು ತೆಗೆದುಕೊಂಡು ಬಂದಿದ್ದಾರೆ. ಅವರಿಂದ ದುಡ್ಡು ಪಡೆದುಕೊಂಡರೂ ಕಾಂಗ್ರೆಸ್ ಅಭ್ಯರ್ಥಿಗೇ ಮತಕೊಡಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರರಿಗೆ ಮನವಿ ಮಾಡಿದರು.</p>.<p>ಸೋಮವಾರ ಇಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,‘ವಿಜಯೇಂದ್ರ ಶಾಸಕರೂ ಅಲ್ಲ, ಸಚಿವರೂ ಅಲ್ಲ. ಅವರ ಬಳಿ ಇರುವುದು ಜನರು ತೆರಿಗೆ ಕಟ್ಟಿರುವ ಹಣ’ ಎಂದರು.</p>.<p>‘ಸಂತೆಯಲ್ಲಿ ಜಾನುವಾರುಮಾರಾಟವಾದಂತೆ ಶಾಸಕರಾಗಿದ್ದ ಪ್ರತಾಪಗೌಡ ₹ 30 ಕೋಟಿ ಪಡೆದು ತಮ್ಮನ್ನು ತಾವು ಮಾರಾಟ ಮಾಡಿಕೊಂಡಿದ್ದಾರೆ.ಕ್ಷೇತ್ರದ ಮತದಾರರ ಗೌರವಕ್ಕೆಚ್ಯುತಿ ತಂದವರನ್ನು ಸಹಿಸಿಕೊಳ್ಳಬಾರದು’ ಎಂದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಅನೈತಿಕ ರಾಜಕಾರಣ ಮಾಡುತ್ತಿರುವ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಲು ಬಸನಗೌಡ ತುರ್ವಿಹಾಳ ಅವರನ್ನು ಆಯ್ಕೆ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ, ಅಮರೇಗೌಡ ಬಯ್ಯಾಪುರ ಮಾತನಾಡಿದರು.</p>.<p><strong>‘ಹೂಮಳೆ’ಯಸ್ವಾಗತ:</strong> ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸಿಂಧನೂರು ತಾಲ್ಲೂಕಿನ ಗ್ರಾಮಗಳಿಗೆ ಸೋಮವಾರ ಉಪಚುನಾವಣೆ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್ ನಾಯಕರನ್ನು ಬೆಂಬಲಿಗರು ಭಾರಿ ಪ್ರಮಾಣದಲ್ಲಿ ಹೂವುಗಳನ್ನು ಸುರಿಸಿ, ಪಟಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತಿಸಿದರು.</p>.<p>ಸಿಂಧನೂರು– ಕುಷ್ಟಗಿ ಮಾರ್ಗದಲ್ಲಿರುವ ಉಮಲೂಟಿ, ಕಲಮಂಗಿ, ತುರ್ವಿಹಾಳ, ಗುಂಜಳ್ಳಿ, ವಿರೂಪಾಪುರ ಹಾಗೂ ಗೌಡನಬಾವಿ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಿಂತುಕೊಂಡಿದ್ದರು.ತುರ್ವಿಹಾಳ ಪಟ್ಟಣದಲ್ಲಿ ಜೆಸಿಬಿ ಯಂತ್ರದ ನೆರವಿನೊಂದಿಗೆ ‘ಹೂಮಳೆ‘ ಸುರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರ್ವಿಹಾಳ (ರಾಯಚೂರು ಜಿಲ್ಲೆ):</strong> ‘ಮಸ್ಕಿ ಕ್ಷೇತ್ರದಲ್ಲಿ ಪ್ರಚಾರ ಮಾಡುತ್ತಿರುವ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ದುಡ್ಡು ತೆಗೆದುಕೊಂಡು ಬಂದಿದ್ದಾರೆ. ಅವರಿಂದ ದುಡ್ಡು ಪಡೆದುಕೊಂಡರೂ ಕಾಂಗ್ರೆಸ್ ಅಭ್ಯರ್ಥಿಗೇ ಮತಕೊಡಿ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರರಿಗೆ ಮನವಿ ಮಾಡಿದರು.</p>.<p>ಸೋಮವಾರ ಇಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,‘ವಿಜಯೇಂದ್ರ ಶಾಸಕರೂ ಅಲ್ಲ, ಸಚಿವರೂ ಅಲ್ಲ. ಅವರ ಬಳಿ ಇರುವುದು ಜನರು ತೆರಿಗೆ ಕಟ್ಟಿರುವ ಹಣ’ ಎಂದರು.</p>.<p>‘ಸಂತೆಯಲ್ಲಿ ಜಾನುವಾರುಮಾರಾಟವಾದಂತೆ ಶಾಸಕರಾಗಿದ್ದ ಪ್ರತಾಪಗೌಡ ₹ 30 ಕೋಟಿ ಪಡೆದು ತಮ್ಮನ್ನು ತಾವು ಮಾರಾಟ ಮಾಡಿಕೊಂಡಿದ್ದಾರೆ.ಕ್ಷೇತ್ರದ ಮತದಾರರ ಗೌರವಕ್ಕೆಚ್ಯುತಿ ತಂದವರನ್ನು ಸಹಿಸಿಕೊಳ್ಳಬಾರದು’ ಎಂದರು.</p>.<p>ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ‘ಅನೈತಿಕ ರಾಜಕಾರಣ ಮಾಡುತ್ತಿರುವ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಲು ಬಸನಗೌಡ ತುರ್ವಿಹಾಳ ಅವರನ್ನು ಆಯ್ಕೆ ಮಾಡಬೇಕು’ ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ, ಅಮರೇಗೌಡ ಬಯ್ಯಾಪುರ ಮಾತನಾಡಿದರು.</p>.<p><strong>‘ಹೂಮಳೆ’ಯಸ್ವಾಗತ:</strong> ಮಸ್ಕಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿರುವ ಸಿಂಧನೂರು ತಾಲ್ಲೂಕಿನ ಗ್ರಾಮಗಳಿಗೆ ಸೋಮವಾರ ಉಪಚುನಾವಣೆ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್ ನಾಯಕರನ್ನು ಬೆಂಬಲಿಗರು ಭಾರಿ ಪ್ರಮಾಣದಲ್ಲಿ ಹೂವುಗಳನ್ನು ಸುರಿಸಿ, ಪಟಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತಿಸಿದರು.</p>.<p>ಸಿಂಧನೂರು– ಕುಷ್ಟಗಿ ಮಾರ್ಗದಲ್ಲಿರುವ ಉಮಲೂಟಿ, ಕಲಮಂಗಿ, ತುರ್ವಿಹಾಳ, ಗುಂಜಳ್ಳಿ, ವಿರೂಪಾಪುರ ಹಾಗೂ ಗೌಡನಬಾವಿ ಗ್ರಾಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಿಂತುಕೊಂಡಿದ್ದರು.ತುರ್ವಿಹಾಳ ಪಟ್ಟಣದಲ್ಲಿ ಜೆಸಿಬಿ ಯಂತ್ರದ ನೆರವಿನೊಂದಿಗೆ ‘ಹೂಮಳೆ‘ ಸುರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>