<p><strong>ರಾಯಚೂರು:</strong> ಜಿಲ್ಲೆಯಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಪ್ರವಾಹ ಅಬ್ಬರ ಏರುಗತಿಯಲ್ಲಿದ್ದು, ನದಿತೀರದ ಗ್ರಾಮಗಳಲ್ಲಿ ಗುರುವಾರವೂ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರ ವಹಿಸಿವೆ.<br /><br />ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ 2.19 ಲಕ್ಷ ಕ್ಯುಸೆಕ್ ಅಡಿ ನೀರು ಹೊರಬಿಡಲಾಗುತ್ತಿದೆ. ಲಿಂಗಸುಗೂರು ನಡುಗಡ್ಡೆಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಈಗ ಸುಮಾರು 50 ಕಿಮೀ ಸುತ್ತುವರೆದು ಜಲದುರ್ಗ ಮಾರ್ಗದ ಮೂಲಕ ಲಿಂಗಸುಗೂರಿಗೆ ಬರಬೇಕಿದೆ.<br /><br />ಪ್ರವಾಹಮಟ್ಟ ಏರುಗತಿಯಲ್ಲಿದ್ದು, 2.5 ಲಕ್ಷ ಕ್ಯುಸೆಕ್ ಗಿಂತ ಹೆಚ್ಚು ನೀರು ಹರಿದುಬಂದರೆ ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಲಿದೆ. ಇದರಿಂದ ಕಲಬುರಗಿ-ರಾಯಚೂರು ಸಂಪರ್ಕದ ಪ್ರಮುಖ ಮಾರ್ಗ ಕಡಿತವಾಗಲಿದೆ.<br /><br />ತುಂಗಭದ್ರಾ ನದಿಯಲ್ಲಿ 1.80 ಲಕ್ಷ ಕ್ಯುಸೆಕ್ ನೀರು ಹರಿದುಬರುತ್ತಿದೆ. ಮಾನ್ವಿ ತಾಲ್ಲೂಕಿನ ನದಿತೀರದ ಕೆಲವು ಗ್ರಾಮಗಳ ಕೃಷಿಬೆಳೆ ನೀರುಪಾಲಾಗಿವೆ. ಯಾವುದೇ ಜೀವ, ಆಸ್ತಿ ಹಾನಿಯಾಗಿಲ್ಲ. ಮಂತ್ರಾಲಯದಲ್ಲಿ ನದಿತಟದ ಮೆಟ್ಟಿಲುಗಳ ಮೇಲೆ ಪ್ರವಾಹವು ತಲುಪಿದೆ.</p>.<p><strong>ಓದಿ...<a href="https://www.prajavani.net/district/yadagiri/karnataka-rains-release-of-water-from-basavasagara-reservoir-to-krishna-river-962274.html" target="_blank">ಯಾದಗಿರಿ: ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ, 2.19 ಲಕ್ಷ ಕ್ಯುಸೆಕ್ ನೀರು ಬಿಡುಗಡೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಜಿಲ್ಲೆಯಲ್ಲಿ ಕೃಷ್ಣಾ ಮತ್ತು ತುಂಗಭದ್ರಾ ನದಿಗಳಲ್ಲಿ ಪ್ರವಾಹ ಅಬ್ಬರ ಏರುಗತಿಯಲ್ಲಿದ್ದು, ನದಿತೀರದ ಗ್ರಾಮಗಳಲ್ಲಿ ಗುರುವಾರವೂ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರ ವಹಿಸಿವೆ.<br /><br />ನಾರಾಯಣಪುರ ಜಲಾಶಯದಿಂದ ಕೃಷ್ಣಾನದಿಗೆ 2.19 ಲಕ್ಷ ಕ್ಯುಸೆಕ್ ಅಡಿ ನೀರು ಹೊರಬಿಡಲಾಗುತ್ತಿದೆ. ಲಿಂಗಸುಗೂರು ನಡುಗಡ್ಡೆಗಳಿಗೆ ಸಂಪರ್ಕಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದ್ದು, ಈಗ ಸುಮಾರು 50 ಕಿಮೀ ಸುತ್ತುವರೆದು ಜಲದುರ್ಗ ಮಾರ್ಗದ ಮೂಲಕ ಲಿಂಗಸುಗೂರಿಗೆ ಬರಬೇಕಿದೆ.<br /><br />ಪ್ರವಾಹಮಟ್ಟ ಏರುಗತಿಯಲ್ಲಿದ್ದು, 2.5 ಲಕ್ಷ ಕ್ಯುಸೆಕ್ ಗಿಂತ ಹೆಚ್ಚು ನೀರು ಹರಿದುಬಂದರೆ ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಸೇತುವೆ ಮುಳುಗಡೆಯಾಗಲಿದೆ. ಇದರಿಂದ ಕಲಬುರಗಿ-ರಾಯಚೂರು ಸಂಪರ್ಕದ ಪ್ರಮುಖ ಮಾರ್ಗ ಕಡಿತವಾಗಲಿದೆ.<br /><br />ತುಂಗಭದ್ರಾ ನದಿಯಲ್ಲಿ 1.80 ಲಕ್ಷ ಕ್ಯುಸೆಕ್ ನೀರು ಹರಿದುಬರುತ್ತಿದೆ. ಮಾನ್ವಿ ತಾಲ್ಲೂಕಿನ ನದಿತೀರದ ಕೆಲವು ಗ್ರಾಮಗಳ ಕೃಷಿಬೆಳೆ ನೀರುಪಾಲಾಗಿವೆ. ಯಾವುದೇ ಜೀವ, ಆಸ್ತಿ ಹಾನಿಯಾಗಿಲ್ಲ. ಮಂತ್ರಾಲಯದಲ್ಲಿ ನದಿತಟದ ಮೆಟ್ಟಿಲುಗಳ ಮೇಲೆ ಪ್ರವಾಹವು ತಲುಪಿದೆ.</p>.<p><strong>ಓದಿ...<a href="https://www.prajavani.net/district/yadagiri/karnataka-rains-release-of-water-from-basavasagara-reservoir-to-krishna-river-962274.html" target="_blank">ಯಾದಗಿರಿ: ಕೃಷ್ಣಾ ನದಿಯಲ್ಲಿ ಪ್ರವಾಹ ಭೀತಿ, 2.19 ಲಕ್ಷ ಕ್ಯುಸೆಕ್ ನೀರು ಬಿಡುಗಡೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>